ವಿಜಯನಗರ: ಬೆಳಗಾವಿಯಲ್ಲಿ ಮಹರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಗೂಂಡಾಗಿರಿ ಕಡಿಮೆಯಾಗಿದೆ ಎಂದು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಮೊದಲಿನಂತೆ ಗೂಂಡಾಗಿರಿ ಇಲ್ಲ. ಎಂಇಎಸ್ ಗೂಂಡಾಗಿರಿ ಸಾಕಷ್ಟು ಕಡಿಮೆಯಾಗುತ್ತಿದೆ ಎಂದು ಅವರು ಹೇಳಿದರು.
‘ಈ ಹಿಂದೆ ನನ್ನ ಕ್ಷೇತ್ರ ನಿಪ್ಪಾಣಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಿರಲಿಲ್ಲ. ಇಂತಹ ಪರಿಸ್ಥಿತಿ ಹಿಂದೆಯೂ ಇತ್ತು. ಆದರೆ ಈಗ ನಾವು ರಾಜ್ಯದಲ್ಲಿ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸುತ್ತಿದ್ದೇವೆ. ಈಗ ಯುವ ಪೀಳಿಗೆ ಎಚ್ಚೆತ್ತುಕೊಂಡಿದೆ. ಹಿಂದೆ ಇದ್ದ ವಾತಾವರಣ ಈಗ ಇಲ್ಲ ಎಂದು ಅವರು ಹೇಳಿದರು.
ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಬಹಿರಂಗ ಅಸಮಾಧಾನದ ಸಮಸ್ಯೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬಗೆಹರಿಸಲಿದ್ದಾರೆ. ಜನಾರ್ಧನ ರೆಡ್ಡಿ ಅವರ ಅಸಮಾಧಾನ ಮತ್ತು ಸಮಸ್ಯೆ ಏನೇ ಇರಲಿ, ವರಿಷ್ಠರು ಅದನ್ನು ಪರಿಹರಿಸುತ್ತಾರೆ ಎಂಬ ವಿಶ್ವಾಸ ನಮಗಿದೆ ಎಂದು ಅವರು ಹೇಳಿದರು.