News Karnataka Kannada
Saturday, May 11 2024
ಕಲಬುರಗಿ

ಕರ್ನಾಟಕ ಗ್ಯಾರಂಟಿ ತೆಲಂಗಾಣದಲ್ಲಿ ವರ್ಕೌಟ್ ಆಗಿದೆ: ಸಚಿವ ಪ್ರಿಯಾಂಕ್ ಹರ್ಷ

ತೆಲಂಗಾಣದ ಬಿಎಸ್‌ಆರ್ ಸರ್ಕಾರ ನಡೆಸಿರುವ ಭ್ರಷ್ಟಾಚಾರದ ವಿರುದ್ದ ಜನ ಮತ ಚಲಾಯಿಸಿ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
Photo Credit : News Kannada

ಕಲಬುರಗಿ: ತೆಲಂಗಾಣದ ಬಿಎಸ್‌ಆರ್ ಸರ್ಕಾರ ನಡೆಸಿರುವ ಭ್ರಷ್ಟಾಚಾರದ ವಿರುದ್ದ ಜನ ಮತ ಚಲಾಯಿಸಿ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ನಗರದಲ್ಲಿ ಮಾತ‌ನಾಡಿದ ಅವರು ‘ನಾನು ಖುದ್ದಾಗಿ ತೆಲಂಗಾಣಕ್ಕೆ ಭೇಟಿ ನೀಡಿದ್ದೇನೆ. 10 ವರ್ಷದ ಕೆಸಿಆರ್ ಆಡಳಿತದಲ್ಲಿ 10 ಹಗರಣಗಳಲ್ಲಿ ₹ 10 ಲಕ್ಷ ಕೋಟಿ ಭ್ರಷ್ಟಾಚಾರ ನಡೆದಿದೆ. ಕಾಲೇಶ್ವರಂ ನೀರಾವರಿ ಯೋಜನೆಯೊಂದರಲ್ಲೇ ₹ 1.50 ಲಕ್ಷ ಕೋಟಿ ಅವ್ಯವಹಾರ ಆಗಿರುವ ಬಗ್ಗೆ ಅಲ್ಲಿನ ಜನರೇ ಮಾತ‌ನಾಡಿಕೊಳ್ಳುತ್ತಿದ್ದರು. ಇದನ್ನು ಮನಗಂಡ ಜನರು ತೆಲಂಗಾಣ ಉಳಿಯಬೇಕಾದರೆ ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ ಎಂದು ನಮ್ಮ ಪಕ್ಷವನ್ನು ಆಯ್ಕೆ ಮಾಡಿದ್ದಾರೆ ಎಂದರು.

ಕರ್ನಾಟಕದಲ್ಲಿ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳು ಕೂಡಾ ತೆಲಂಗಾಣದಲ್ಲಿ ಪ್ರಭಾವ ಬೀರಿವೆ ಎಂದು ಹೇಳಿದ ಪ್ರಿಯಾಂಕ್, ಜನರ ಪರವಾದ ಅಭಿವೃದ್ದಿ ಪರವಾದ ಹಾಗೂ ಆರ್ಥಿಕ ಸ್ಥಿರತೆ ನಿರ್ಮಾಣ ಮಾಡುವ ಯೋಜನೆಗಳನ್ನು ಇಟ್ಟುಕೊಂಡೇ ನಾವು ಛತ್ತೀಸಗಡ, ರಾಜಸ್ಥಾನ ಹಾಗೂ ಮಧ್ಯಪ್ರದೇಶದಲ್ಲಿ ಪ್ರಣಾಳಿಕೆ ತಯಾರು ಮಾಡಿದ್ದೇವೆ. ಇದಕ್ಕೆ ಜನರು ಮನ್ನಡೆ ನೀಡಿದ್ದಾರೆ. ಆದರೆ ಬಿಜೆಪಿಯವರು ಧರ್ಮ‌ ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಅವರ ಒಂದೇ ಒಂದು‌ ಜನಪರ ಹಾಗೂ ಆರ್ಥಿಕ‌ ಸಬಲತೆ ಮೂಡಿಸುವ ಕಾರ್ಯಕ್ರಮಗಳು ಇಲ್ಲ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು