ಜಿಲ್ಲೆಯ ಶಹಾಪುರದಲ್ಲಿ ಮಹಿಳೆಯೊಬ್ಬಳನ್ನು ಬೆತ್ತಲೆ ಮಾಡಿ ಅಮಾನವೀಯವಾಗಿ ಹಲ್ಲೆ ನಡೆಸಿ, ಗ್ಯಾಂಗ್ ರೇಪ್ ನಡೆಸಿದ ವಿಕೃತರ ಕರಾಳ ಘಟನೆ ಮಾಸುವ ಮುನ್ನವೇ, ಇದೇ ಜಿಲ್ಲೆಯ ಸುರಪುರ ತಾಲೂಕಿನಲ್ಲಿ ನಡೆದ ಈ ಪ್ರಕರಣ ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ.
ಸುರಪುರ ತಾಲೂಕಿನ ಚೌಡೇಶ್ವರಿಹಾಳದ ಈ ಮಹಿಳೆ 23 ವರ್ಷದ ವಯಸ್ಸಿನ ಈ ಮಹಿಳೆ ಸೋಮವಾರ ಮಧ್ಯಾಹ್ನ ಕಲಬುರಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಕೃತ್ಯದ ನಂತರ ಪರಾರಿಯಾದ ಅದೇ ಗ್ರಾಮದ ಆರೋಪಿ ಗಂಗೆಪ್ಪ ಎಂಬಾತನ ಪತ್ತೆಗಾಗಿ ಪೊಲೀಸರು ಜಾಲ ಬೀಸಿದ್ದಾರೆ. ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.