ಯಾದಗಿರಿ : ಫೆ.25ರಂದು ಜಿಲ್ಲೆಯ ದೋರನಹಳ್ಳಿ ಕ್ಯಾಂಪ್ ನಲ್ಲಿ ನಡೆಯುತ್ತಿದ್ದಂತ ಸೀಮಂತ ಕಾರ್ಯಕ್ರಮದಲ್ಲಿ ಅಡುಗೆ ಮಾಡುತ್ತಿದ್ದಂತ ಸಂದರ್ಭದಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡಿತ್ತು. 17ಕ್ಕೂ ಹೆಚ್ಚು ಜನರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಇದೀಗ ಚಿಕಿತ್ಸೆ ಪಡೆಯುತ್ತಿದ್ದಂತ ಮತ್ತಿಬ್ಬರು ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಹೀಗಾಗಿ ಮೃತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.
ಈಗಾಗಲೇ ಸೀಮಂತ ಕಾರ್ಯಕ್ರಮದಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟದಲ್ಲಿ ಐವರು ಸಾವನ್ನಪ್ಪಿದ್ದರು. ತೀವ್ರವಾಗಿ 19 ಮಂದಿ ಗಾಯಗೊಂಡಿದ್ದರು. ಇವರಲ್ಲಿ ಈಗಾಗಲೇ ಐವರು ಸಾವನ್ನಪ್ಪಿದ್ದರು. ಇದೀಗ ಇಂದು ಕಲಬುರ್ಗಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಭೀಮರಾಯ (78 ) ಹಾಗೂ ವೀರಬಸಪ್ಪ (28) ಐದು ದಿನಗಳ ಚಿಕಿತ್ಸೆ ಬಳಿಕ, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.