ಯಾದಗಿರಿ : ಹೆಬ್ಬಾವನ್ನು ಹಿಡಿದೆಳೆದು ಹಿಂಸಿಸಿ ಅದರ ಬಾಲ ಹಿಡಿದು ಅದರ ಮೇಲೆ ಬಸ್ ಹಾಯಿಸಿ, ವಿಕೃತಿ ಮೆರೆದಿರುವ ಘಟನೆ ನಡೆದಿದೆ. ಈ ಕುರಿತು ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಸುರಪುರ ಪಟ್ಟಣದ ರಂಗಂಪೇಟೆಯಲ್ಲಿ ಈ ಘಟನೆ ನಡೆದಿದೆ. ಬೀದರ್ – ಬೆಂಗಳೂರು ಹೆದ್ದಾರಿಯ ರಂಗಂಪೇಟೆಯಲ್ಲಿ ಮಂಗಳವಾರ ರಾತ್ರಿ ಕಲ್ಲುಗಳ ಸಂದಿಯಲ್ಲಿ ಹೋಗುತ್ತಿದ್ದ ಹೆಬ್ಬಾವನ್ನು ಹಿಡಿದ ಸಾರ್ವಜನಿಕರು ಅದನ್ನು ಹಿಡಿದು ರಸ್ತೆಯಲ್ಲಿ ಎಳೆದಾಡಿದ್ದಾರೆ.
ಮಾತ್ರವಲ್ಲ, ಆ ನಂತರ ಅದರ ಮೇಲೆ ಸಾರಿಗೆ ಬಸ್ ನ್ನು ಹರಿಸಿ ಹಿಂಸಿಸಿ ಸಂಭ್ರಮಿಸಿದ್ದಾರೆ. ದುರುಳರ ಈ ಕೃತ್ಯಕ್ಕೆ ಬಸ್ ಚಾಲಕ ಕೂಡ ಸಹಕರಿಸಿದ್ದಾರೆ.
ತನ್ನ ಪಾಡಿಗೆ ಸುಮ್ಮನಿದ್ದ ಹೆಬ್ಬಾವನ್ನು ಹಿಡಿದು ಹಿಂಸಿಸಿದ ಈ ಜನರು ತಮ್ಮ ಕೃತ್ಯವನ್ನು ವಿಡಿಯೋ ಮಾಡಿಕೊಂಡಿದ್ದಾರೆ. ಅಲ್ಲಿ ನೆರೆದಿದ್ದವರು ಕೂಡ ಈ ಕೃತ್ಯವನ್ನು ನೋಡಿ ಕೂಗಾಡಿದ್ದಾರೆ. ಈ ವಿಡಿಯೋ ನೋಡಿದ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.