ಯಾದಗಿರಿ : ಸಾಲಭಾದೆ ತಾಳಲಾರದೆ ಯುವ ರೈತ ನಿಂಗಪ್ಪ(30) ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ನಡೆದಿದೆ.
ಆತ್ಮಹತ್ಯೆಗೂ ಮುನ್ನ ಸಾಲಕೊಟ್ಟ ಫೈನಾನ್ಸ್ ಕಂಪನಿಗಳ ಕಿರುಕುಳ ಕುರಿತು ರೈತ ಮಾಡಿದ್ದ ವಿಡಿಯೋ ವೈರಲ್ ಆಗಿದೆ. ಅಲ್ಲದೇ ಖಾಸಗಿ ಫೈನಾನ್ಸ್ಗಳು ಬಡ್ಡಿ-ಚಕ್ರಬಡ್ಡಿ ನೆಪದಲ್ಲಿ ಸುಲಿಗೆ, ರೈತರಿಗೆ ಸರ್ಕಾರ ಸೌಲಭ್ಯಗಳ ನೀಡುತ್ತಿಲ್ಲವೆಂಬ ಮುಂತಾದ ಕಾರಣಗಳ ಡೆತ್ನೋಟ್ ಬರೆದಿಟ್ಟು ಸಾವಿಗೆ ಶರಣಾಗಿದ್ದಾರೆ.
ಎಂ.ಎ. ಬಿಎಡ್ ವ್ಯಾಸಾಂಗ ಮಾಡಿದ್ದ ನಿಂಗಪ್ಪ ನೌಕರಿ ಸಿಗದೆ ಇದ್ದಾಗ, ಕೃಷಿಯಲ್ಲೇ ಖುಷಿ ಪಡಬಹುದು ಎಂಬ ನಂಬಿಕೆಯ ಮೇಲೆ ಒಕ್ಕಲುತನ ಆಶ್ರಯಿಸಿದ್ದರು. ಆದರೆ ಸತತ 4 ವರ್ಷದಿಂದ ಸೂಕ್ತವಾದ ಬೆಳೆ, ಬೆಲೆ ಸಿಗದ ಕಾರಣ ಸಾಲ ಮಾಡಿದ್ದರು ಎಂದು ತಿಳಿದುಬಂದಿದೆ. ಆದರೆ, ಸಾಲಗಾರರ ಕಾಟಕ್ಕೆ ಹೆದರಿ ಸೋಮವಾರ ಮುಂಜಾನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಆಪ್ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್ ಕುಮಾರ್ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…
ಲೋಕಾಯುಕ್ತದ ಕಲಬುರಗಿ ಡಿವೈಎಸ್ಪಿ ಆಯಂಟನಿ ಜಾನ್ ಹಾಗೂ ಇತರೆ ಅಧಿಕಾರಿಗಳು ಗುರುವಾರ ನಗರದಲ್ಲಿನ ತಾಲ್ಲೂಕು ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ…
ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ತೆಲುಗು ಧಾರಾವಾಹಿ ನಟ…
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…