ಯಾದಗಿರಿ: ಸಾಲಬಾಧೆಯಿಂದ ಮನನೊಂದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಕಂದಕೂರು ಗ್ರಾಮದಲ್ಲಿ ನಡೆದಿದೆ.
ರೈತ ಶಾಂತಪ್ಪ ಉಪ್ಪಾರ್ (35) ಮೃತ ದುರ್ದೈವಿ. ಮನೆಯಲ್ಲಿ ಯಾರು ಇಲ್ಲದ ವೇಳೆ ಶಾಂತಪ್ಪ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ.
ಶಾಂತಪ್ಪ ಸುಮಾರು 2 ಲಕ್ಷ ರೂಪಾಯಿವರೆಗೂ ಕೈಸಾಲ ಮಾಡಿಕೊಂಡಿದ್ದರು. ತಂದೆ ಹೆಸರಿನಲ್ಲಿ 4 ಎಕರೆ ಭೂಮಿಯಲ್ಲಿ ಕೃಷಿ ಮಾಡುತ್ತಿದ್ದರು. ಆದರೆ ಬೆಳೆದ ತೊಗರಿ ಬೆಳೆ ಕೂಡ ಹಾನಿಯಾಗಿತ್ತು. ಸಾಲ ಪಾವತಿ ಮಾಡಲು ಎರಡು ಎತ್ತುಗಳನ್ನು ಕೂಡ ಮಾರಾಟ ಮಾಡಿದ್ದರು.
ಆದರೆ ಸಾಲಗಾರರ ಕಾಟಕ್ಕೆ ಬೇಸತ್ತು ಶಾಂತಪ್ಪ ಮನೆಯಲ್ಲೇ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ. ಈ ಪ್ರಕರಣ ಗುರುಮಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದೆ.