ಯಾದಗಿರಿ: ಪ್ರಧಾನಿ ಮೋದಿ, ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ನಿಂದಿಸಿ ಜೀವ ಬೆದರಿಕೆ ಹಾಕಿದ್ದ ಆರೋಪಿಯನ್ನು ಸುರಪುರ ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ರಸೂಲ್ ಕಡ್ದಾರೆ ಬಂಧಿತ ಆರೋಪಿ.
ಆರೋಪಿ ರಸೂಲ್ ಹೈದರಾಬಾದ್ನಿಂದ ಬಂದು ಸುರಪುರದಲ್ಲಿದ್ದ. ಯಾದಗಿರಿ ಜಿಲ್ಲೆಯ ಸುರಪುರದ ರಂಗಂಪೇಟೆಯಲ್ಲಿ ವಾಸವಾಗಿದ್ದ ಈತ, ಹೈದ್ರಾಬಾದ್ನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ. ಕೈಯಲ್ಲಿ ತಲವಾರ ಹಿಡಿದುಕೊಂಡು ನಿಂದನೆ ಮಾಡಿ ಜೀವ ಬೆದರಿಕೆ ಹಾಕಿದ್ದ.
ಜೀವ ಬೇದರಿಕೆಯ ವೀಡಿಯೋವನ್ನು ಫೇಸ್ಬುಕ್ನಲ್ಲಿ ಅಪ್ಲೋಡ್ ಮಾಡಿದ್ದ. ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ರಾಮಸೇನಾ ಜಿಲ್ಲಾಧ್ಯಕ್ಷ ಶರಣು ನಾಯಕ ನಿನ್ನೆ ಸುರಪುರ ಠಾಣೆಯಲ್ಲಿ ದೂರು ನೀಡಿದ್ದರು. ಈ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.