News Karnataka Kannada
Sunday, April 28 2024
ಯಾದಗಿರಿ

ಕೊಳಚೆ ಪ್ರದೇಶದಲ್ಲಿ ಅನಾಥವಾಗಿ ಬಿದ್ದಿರುವ ‘ಅಶೋಕ ಚಕ್ರ’

ashoka chakra
Photo Credit : News Kannada

ಯಾದಗಿರಿ: ಜಿಲ್ಲೆಯ ವಡಗೇರಾದಲ್ಲಿ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದ ರಾಷ್ಟ್ರ ಲಾಂಛನ ಅನಾಥವಾಗಿ ಬೀದಿಯಲ್ಲಿ ನಿಲ್ಲಿಸಲಾಗಿದೆ. ಕೊಳಚೆ ಪ್ರದೇಶದಲ್ಲಿ ಅನಾಥವಾಗಿ ಬಿದ್ದಿರುವ ರಾಷ್ಟ್ರ ಲಾಂಛನವನ್ನು ತಂದಿಡಲಾಗಿದೆ.

1996ರಲ್ಲಿ ಗ್ರಾಮದಲ್ಲಿ 50-60 ಸಾವಿರ ರೂ. ಖರ್ಚು ಮಾಡಿ ವಡಗೇರಾದ ಮುಖ್ಯದ್ವಾರಕ್ಕೆ ಗ್ರಾಮ ಪಂಚಾಯಿತಿ ವತಿಯಿಂದ ರಾಷ್ಟ್ರ ಲಾಂಛನವನ್ನು ಅಳವಡಿಸಲಾಗಿತ್ತು. ಆದರೆ ಕಳೆದ 4-5 ವರ್ಷಗಳ ಹಿಂದೆ ರಸ್ತೆ ಅಗಲೀಕರಣದ ವೇಳೆ ರಾಷ್ಟ್ರ ಲಾಂಛನ ತೆಗೆದು ಆಂಜನೇಯ ದೇವಸ್ಥಾನದ ಪಕ್ಕದಲ್ಲಿ ಕೊಳಚೆ ಪ್ರದೇಶದಲ್ಲಿ ಇರಿಸಲಾಗಿದೆ.

ಅಂದಿನಿಂದ ಇಂದಿನವರೆಗೂ ರಾಷ್ಟ್ರ ಲಾಂಛನ ಅನಾಥವಾಗಿ ಬಿದ್ದಿರೋದು ಅಧಿಕಾರಿಗಳ ಅವಿವೇಕತನವನ್ನು ಎತ್ತಿ ತೋರಿಸುತ್ತಿದೆ. ಕೂಡಲೇ ರಾಷ್ಟ್ರ ಲಾಂಛನವನ್ನ ಸೂಕ್ತ ಸ್ಥಳದಲ್ಲಿರಿಸಿ, ಗೌರವ ಸೂಚಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು