News Karnataka Kannada
Monday, April 29 2024
ಯಾದಗಿರಿ

SSLC ಪರೀಕ್ಷೆಯಲ್ಲಿ ನಕಲು: ಇಬ್ಬರು ಶಿಕ್ಷಕರು ಅಮಾನತು

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಮಕ್ಕಳಿಗೆ ನಕಲು ಮಾಡಲು ಸಹಕರಿಸಿದ ಇಬ್ಬರು ಶಿಕ್ಷಕರ ಅಮಾನತು ಮಾಡಿರುವ ಘಟನೆ ನಡೆದಿದೆ.
Photo Credit : NewsKarnataka

ಯಾದಗಿರಿ: ಎಸ್​​ಎಸ್​​ಎಲ್​ಸಿ ಪರೀಕ್ಷೆಯಲ್ಲಿ ಮಕ್ಕಳಿಗೆ ನಕಲು ಮಾಡಲು ಸಹಕರಿಸಿದ ಇಬ್ಬರು ಶಿಕ್ಷಕರನ್ನು  ಅಮಾನತು ಮಾಡಿರುವ ಘಟನೆ ನಡೆದಿದೆ.

ಹುಣಸಗಿ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರಾಗಿದ್ದ ಸುರಪುರ ತಾಲೂಕಿನ ಏವೂರು ಸರ್ಕಾರಿ ಶಾಲೆಯ ಶಿಕ್ಷಕ ಸಾಹೇಬ್​ಗೌಡ ಮತ್ತು ಸುರಪುರ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರಾಗಿದ್ದ ಝಂಡದಕೇರ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕ ಹನುಮಂತರಾಯ ಇವರಿಬ್ಬರನ್ನು ಅಮಾನತು ಮಾಡಿ ಯಾದಗಿರಿ ಜಿ.ಪಂ. ಸಿಇಒ ಗರೀಮಾ ಪನ್ವಾರ್ ಆದೇಶ ಹೊರಡಿಸಿದ್ದಾರೆ.

ವಿದ್ಯಾರ್ಥಿಗಳು ನಕಲು ಮಾಡುತ್ತಿದ್ದರೂ ಮೇಲ್ವಿಚಾರಕರು ಯಾವುದೇ ಕ್ರಮಕೈಗೊಂಡಿರಲಿಲ್ಲ. ಮುಖ್ಯ ಅಧೀಕ್ಷಕರ ಗಮನಕ್ಕೂ ತರದೆ ಪರೀಕ್ಷಾ ಮೇಲ್ವಿಚಾರಕರು ನಿರ್ಲಕ್ಷಿಸಿದ್ದಾರೆ. ಸಿಸಿ ಕ್ಯಾಮರಾ ದೃಶ್ಯ ಆಧರಿಸಿ ಇಬ್ಬರು ಪರೀಕ್ಷಾ ಮೇಲ್ವಿಚಾರಕರನ್ನು ಈ ಕಾರಣಕ್ಕಾಗಿ ಅಮಾನತುಗೊಳಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು