ಯಾದಗಿರಿ: ವಿವಿಧ ನಿಗಮ ಮಂಡಳಿಗಳಿಗೆ ಖಾಲಿ ಇರುವ ಹುದ್ದೆಗಳಿಗೆ ಇತ್ತೀಚೆಗೆ ನಡೆದ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ಅಕ್ರಮ ಎಸಗಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತಂಡದಿಂದ ಯಾದಗಿರಿಯಲ್ಲಿ ಗುರುವಾರ ತನಿಖೆ ಆರಂಭವಾಗಿದೆ.
ಸಿಐಡಿ ಎಸ್ಪಿ ರಾಘವೇಂದ್ರ ಹೆಗಡೆ ಅವರ ನೇತೃತ್ವದಲ್ಲಿ ನಗರದ ಹಳೆ ಪ್ರವಾಸಿ ಮಂದಿರಕ್ಕೆ ಬಂದು ಸ್ಥಳೀಯ ಪೊಲೀಸರಿಂದ ಮಾಹಿತಿ ಪಡೆದುಕೊಂಡಿದ್ದಾರೆ.
ಸಿಐಡಿಯ ಸಿಪಿಐಗಳಾದ ಹರಿವರ್ಧನ್ ಹಾಗೂ ಸಂಗನಾಥ ನೇತೃತ್ವದಲ್ಲಿ ತಂಡ ರಚಿಸಿ ತನಿಖೆ ಆರಂಭಿಸಲಾಗಿದೆ. ಅಲ್ಲದೆ ಇದುವರೆಗೆ ತನಿಖೆ ನಡೆಸಿದ್ದ ತನಿಖಾಧಿಕಾರಿಗಳಿಂದ ಸಿಐಡಿ ಎಸ್ಪಿ ರಾಘವೇಂದ್ರ ಹೆಗಡೆ ಮಾಹಿತಿ ಪಡೆದಿದ್ದಾರೆ.