News Karnataka Kannada
Sunday, May 12 2024
ಯಾದಗಿರಿ

ಹಣ ಕೊಟ್ಟರೂ ಕರೆಂಟ್‌ ಸಿಗ್ತಿಲ್ಲ ಎಂದ ಸಚಿವ ಕೃಷ್ಣ ಭೈರೇಗೌಡ

Minister Krishna Byre Gowda says he won't get electricity even if he pays money
Photo Credit : News Kannada

ಯಾದಗಿರಿ: ರಾಜ್ಯದಲ್ಲಿ ತೀವ್ರ ಬರದ ಸ್ಥಿತಿಯಿದೆ. ಕುಡಿಯುವ ನೀರಿಗೂ ತೀವ್ರ ಕೊರತೆ ಕಾಡುತ್ತಿದೆ. ಈ ನಡುವೆ ವಿದ್ಯುತ್‌ ಕೊರತೆ ರೈತರನ್ನು ಕಂಗಾಲಾಗಿಸಿದೆ. ಈ ನಡುವೆ ವಿದ್ಯುತ್‌ ಖರೀದಿ ಕುರಿತು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿಕೆ ನೀಡಿದ್ದಾರೆ.

ದೇಶದ ಎಲ್ಲಾ ರಾಜ್ಯಗಳಲ್ಲೂ ವಿದ್ಯುತ್ ಸಮಸ್ಯೆಯಿದೆ. ಹಣ ಕೊಡುತ್ತೇವೆ ಅಂದರೂ ಬೇರೆ ರಾಜ್ಯಗಳಿಂದ ವಿದ್ಯುತ್ ಸಿಗುತ್ತಿಲ್ಲ ಎಂದು ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡ ಹೇಳಿದರು.

ವಿದ್ಯುತ್ ಸಮಸ್ಯೆ ವಿಚಾರವನ್ನು ಸಿಎಂ ಸಿದ್ದರಾಮಯ್ಯ ಬಹಳ ಗಂಭೀರವಾಗಿ ಪರಿಣಿಸಿದ್ದಾರೆ. ಎಲ್ಲಾ ವಿದ್ಯುತ್ ಕಂಪನಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದ್ದಾರೆ. ಇಂಧನ ಸಚಿವರು ವಿದ್ಯುತ್ ಖರೀದಿಸಲು ಎಲ್ಲಾ ಕಡೆ ಪ್ರಯತ್ನ ಮಾಡ್ತಿದ್ದಾರೆ. ಯಾದಗಿರಿ ಉಸ್ತುವಾರಿ ಸಚಿವರು ಜೆಸ್ಕಾಂ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ.

ಇರುವುದರಲ್ಲೇ ವೇರಿಯೇಷನ್ ಮಾಡಿ ವಿದ್ಯುತ್ ನೀಡಲು ಪ್ರಯತ್ನಿಸುತ್ತಿದ್ದಾರೆ. ವಿದ್ಯುತ್ ಉತ್ಪಾದನೆಗೆ ಕಲ್ಲಿದ್ದಲು ಸಮಸ್ಯೆ ಕಾಡುತ್ತಿದೆ ಎಂದು ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು