ಯಾದಗಿರಿ: ಮಲತಾಯಿಯೊಬ್ಬಳು ಐದು ವರ್ಷದ ಹೆಣ್ಣುಮಗುವೊಂದಕ್ಕೆ ಕೀಟನಾಶಕ ಬೆರೆಸಿದ ಹಾಲು ಕುಡಿಸಿ ಕೊಂದ ಘಟನೆ ಯಾದಗಿರಿ ಜಿಲ್ಲೆಯ ಬಬಲಾ ಗ್ರಾಮದಲ್ಲಿ ನಡೆದಿದೆ.
ಈ ಘಟನೆ ಆಗಸ್ಟ್ 30 ರಂದು ಸಂಭವಿಸಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ದೇವಮ್ಮ ಚೆಟ್ಟಿಗೇರಿ ಎಂಬಾಕೆ ಆರೋಪಿಯಾಗಿದ್ದು, ಈಕೆ ಸಂಗೀತಾ ಚೆಟ್ಟಿಗೇರಿ ಎಂಬ ಪುಟ್ಟ ಮಗುವಿಗೆ ಹಾಲಿನಲ್ಲಿ ವಿಷ ಬೆರೆಸಿ ಕೃತ್ಯ ಎಸಗಿದ್ದಾಳೆ. ಹಸುಗೂಸಿಗೆ ತಾಯಿ ಶ್ರೀದೇವಿ ಹಾಲು ಕುಡಿಸುತ್ತಿದ್ದಾಗ ಅಲ್ಲಿಗೆ ಬಂದ ದೇವಮ್ಮ, ತಾನು ಹಾಲುಣಿಸುತ್ತೇನೆ ಎಂದು ಕರೆದೊಯ್ದಿದ್ದಾಳೆ. ಹೀಗೆ ರೂಮಿಗೆ ಕರೆದೊಯ್ದು ಡೋರ್ ಹಾಕಿ ಹಾಲಿನ ಬಾಟ್ಲಿಯಲ್ಲಿ ವಿಷ ಬೆರೆಸಿ ಕೂಸಿಗೆ ಕೊಟ್ಟಿದ್ದಾಳೆ ಎಂದು ಹೇಳಲಾಗಿದೆ.
ವಿಷಬೆರೆತ ಹಾಲು ಕುಡಿದ ಸಂಗೀತಾ 3 ಗಂಟೆ ನಂತರ ಬಾಯಲ್ಲಿ ನೊರೆ ಬಂದು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮಗು ಕೊನೆಯುಸಿರೆಳೆದಿದೆ. ಸದ್ಯ ವಡಗೇರಾ ಪೊಲೀಸರು ಆರೋಪಿ ದೇವಮ್ಮಳನ್ನ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಈ ಸಂಬಂಧ ವಡಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಬಲಾದ ಗ್ರಾಮದ ಸಿದ್ದಪ್ಪ ಚೆಟ್ಟಿಗೇರಿ ಎಂಬಾತ ಎರಡು ಮದುವೆಯಾಗಿದ್ದ. 11 ವರ್ಷಗಳ ಹಿಂದೆ ಸಿದ್ದಪ್ಪ ಮೊದಲು ಶ್ರೀದೇವಿಯನ್ನ ಮದುವೆಯಾಗಿದ್ದ. ಆದರೆ ಮಕ್ಕಳಾಗದ ಹಿನ್ನೆಲೆ 7 ವರ್ಷದ ಹಿಂದೆ ದೇವಮ್ಮಳನ್ನು ಮದುವೆಯಾಗಿದ್ದ ಎನ್ನಲಾಗಿದೆ. ದೇವಮ್ಮಳನ್ನ ಮದುವೆಯಾದ್ಮೇಲೆ ಮೊದಲ ಪತ್ನಿ ಶ್ರೀದೇವಿ ಗಂಡನ ಮನೆ ಬಿಟ್ಟು ಚಾಮನಳ್ಳಿಯ ತನ್ನ ತವರು ಮನೆಯಲ್ಲಿದ್ದಳು.
ಹಿರಿಯರ ರಾಜಿ ಸಂಧಾನದ ನಂತರ ಮೂರು ವರ್ಷಗಳ ಹಿಂದೆ ಬಬಲಾದ ಗ್ರಾಮದ ಗಂಡನ ಮನೆಗೆ ಶ್ರೀದೇವಿ ಮತ್ತೆ ಬಂದಿದ್ದಳು. ಕಳೆದ ಐದು ತಿಂಗಳ ಹಿಂದೆ ಶ್ರೀದೇವಿಗೆ ಹೆಣ್ಣು ಮಗು ಜನಿಸಿತ್ತು. ಇತ್ತ ಆರೋಪಿ ದೇವಮ್ಮಳಿಗೆ ನಾಲ್ಕು ಜನ ಮಕ್ಕಳಿದ್ದಾರೆ. ಹೀಗಾಗಿ ಆಸ್ತಿಯಲ್ಲಿ ಸವತಿ ಶ್ರೀದೇವಿಯ ಐದು ತಿಂಗಳ ಮಗು ಸಂಗೀತಾಗೆ ಪಾಲು ಹೋಗುಬಾರದು ಎಂದು ಈ ಕೃತ್ಯ ಎಸಗಿದ್ದಾಳೆ ಎನ್ನಲಾಗಿದೆ.
ಬಿಸಿಲು ಹಾಗೂ ಅದರ ಝಳದಿಂದ ಜನ ಒಂದೆಡೆ ತೀವ್ರ ಅನಾರೋಗ್ಯದ ಸಮಸ್ಯೆ ಎದುರಿಸುತ್ತಿದ್ದರೆ, ಏರ್ ಕಂಡಿಷನರ್ (ಎಸಿ), ಏರ್ ಕೂಲರ್ಗಳ…
ಮುಂಬರುವ ವಿಧಾನಪರಿಷತ್ ಚುನಾವಣೆಯಲ್ಲೂ ಜೆಡಿಎಸ್-ಬಿಜೆಪಿಮೈತ್ರಿ ಮುಂದುವರಿಯಲಿದ್ದು, ಮೈತ್ರಿಗೆ ಯಾವುದೇ ಭಂಗ ಆಗುವುದಿಲ್ಲ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ…
ಪ್ರತಿಷ್ಠಿತ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ವೇಣುಗೋಪಾಲಸ್ವಾಮಿ ಬೆಟ್ಟದ ದೇಗುಲ ಆವರಣದ ಬಳಿ ಎಂದಿನಂತೆ ಆಗಮಿಸಿದ ಒಂಟಿ ಆನೆ ವಾಪಾಸ್…
ಸಾಲ ಮಾಡಿ ಬೆಳೆದ ಬೆಳೆಯನ್ನು ಕಾಡಾನೆ ಹಿಂಡುಗಳು ನಾಶ ಮಾಡಿದ್ದರಿಂದ ಮನನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಲೂರು ತಾಲೂಕಿನ ಅರೇಹಳ್ಳಿ ಹೋಳಿಯ ಚಿಕ್ಕಸಾಲಾವರದ ಬಾವಿಕಟ್ಟೆ ಗ್ರಾಮದಲ್ಲಿ ನಡೆದಿದೆ.
ಬಂಡೀಪುರ ಪ್ರವೇಶದ್ವಾರದ ಬಳಿ ಭಾರಿ ವಾಹನ ಕೆಟ್ಟು ನಿಂತ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೆ ಅಡ್ಡಿಯುಂಟಾಯಿತು. ಕಿಲೋಮೀಟರ್ ಗಟ್ಟಲೆ…
ವಾರಾಂತ್ಯದ ರಜೆ ಹಿನ್ನೆಲೆ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಸಹಸ್ರಾರು ಮಂದಿ ಪ್ರವಾಸಿಗರು ಹಾಗೂ ಭಕ್ತಗಣ ಆಗಮಿಸಿದ್ದರು…