ಯಾದಗಿರಿ: ಯಾದಗಿರಿ ರೈಲ್ವೆ ನಿಲ್ದಾಣದಲ್ಲಿ ಹಳಿ ದಾಟುವಾಗ ರೈಲು ಡಿಕ್ಕಿ ಹೊಡೆದು ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ.
ಯಾದಗಿರಿ ತಾಲೂಕಿನ ಪಗಲಾಪುರ ಗ್ರಾಮದ ಮಲ್ಲಮ್ಮ (65) ಸಾವನ್ನಪ್ಪಿದ ಮಹಿಳೆ. ನಸುಕಿನ ಜಾವ 5.30 ಗಂಟೆಗೆ ಚೆನ್ನೈ-ಮುಂಬೈ ಸುಪರ್ ಎಕ್ಸ್ಪ್ರೆಸ್ ರೈಲು ಡಿಕ್ಕಿ ಹೊಡೆದಿದೆ.
ಮಲ್ಲಮ್ಮ ತನ್ನ ಮಗನ ಜೊತೆ ಮುಂಬೈಗೆ ತೆರಳುತ್ತಿದ್ದರು. ರೈಲ್ವೆ ಸೇತುವೆ ಮೂಲಕ ಪ್ಲಾಟ್ ಪಾರ್ಮ್ ನಂಬರ್ 2ಕ್ಕೆ ತೆರಳಬೇಕಾಗಿತ್ತು. ಆದರೆ ವೃದ್ಧೆ ನಿರ್ಲಕ್ಷ್ಯ ವಹಿಸಿ ರೈಲ್ವೆ ಬರುತ್ತಿದ್ದಾಗಲೇ ಅವಸರದಲ್ಲಿ ಹಳಿ ದಾಟಿದ್ದಾಳೆ.
ರೈಲು ಡಿಕ್ಕಿ ಹೊಡೆದ ಪರಿಣಾಮ ಆಕೆಯ ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದ ಹಿನ್ನೆಲೆಯಲ್ಲಿ ಅಲ್ಲೇ ಮೃತಪಟ್ಟಿದ್ದಾರೆ. ವೃದ್ಧೆಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ
ದುರ್ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿದ್ದಾರೆ.