News Karnataka Kannada
Sunday, April 28 2024
ಯಾದಗಿರಿ

ಯಾದಗಿರಿಯಲ್ಲೊಂದು ಘನಘೋರ ಕೃತ್ಯ: ನಿಶ್ಚಿತಾರ್ಥವಾಗಿದ್ದ ಯುವತಿಗೆ ಆಗಿದ್ದೇನು?

Girl tortured by teacher for refusing to have sex, burnt with blade, cigarette
Photo Credit : News Kannada

ಯಾದಗಿರಿ: ಯಾದಗಿರಿ ಜಿಲ್ಲೆಯಲ್ಲಿ ವಿವಾಹ ನಿಶ್ಚಿತಾರ್ಥವಾಗಿದ್ದ ಯುವತಿಯನ್ನು ಸಾಮೂಹಿಕವಾಗಿ ಅತ್ಯಾಚಾರ ಮಾಡಿ ಕೊಂದಿರುವ ಘಟನೆ ನಡೆದಿದೆ.

ಕೊಲೆಯಾದ 35 ವರ್ಷದ ಯುವತಿಯನ್ನು ಮುದ್ನಾಳ್ ತಾಂಡಾ ನಿವಾಸಿ ಸುಶ್ಮಿತಾ (ಹೆಸರು ಬದಲಾಯಿಸಲಾಗಿದೆ) ಗೆ ಕೆಲದಿನಗಳ ಹಿಂದಷ್ಟೇ ಆಕೆಗೆ ನಿಶ್ಚಿತಾರ್ಥವಾಗಿದ್ದು, ಶೀಘ್ರದಲ್ಲಿಯೇ ಮದುವೆ ನಡೆಯುವುದರಲ್ಲಿತ್ತು. ಸಂತ್ರಸ್ತೆ ಸವಿತಾ ವಿಶೇಷಚೇತನ ಯುವತಿಯಾಗಿದ್ದು, ಆಕೆ ಅಣ್ಣನೊಂದಿಗೆ ವಾಸಿಸುತ್ತಿದ್ದಳು. ಸೆ. 9ರಂದು ಯುವತಿ ಕಂಚಗಾರಹಳ್ಳಿ ಕ್ರಾಸ್‌ನಲ್ಲಿರುವ ತನ್ನ ಜಮೀನಿಗೆ ಸಂತ್ರಸ್ತೆ ಹೋಗಿದ್ದ ವೇಳೆ ಘಟನೆ ನಡೆದಿದೆ.

ಸವಿತಾಳ ಎದೆ ಮತ್ತು ಕಿವಿಯ ಮೇಲೆ ಇರಿತದ ಗಾಯಗಳಾಗಿದ್ದು, ಗ್ರಾಮಸ್ಥರು ಆಕೆಯನ್ನು ತಕ್ಷಣ ಕಲಬುರಗಿಯ ಆಸ್ಪತ್ರೆಗೆ ರವಾನಿಸಿದ್ದರು. ಆದರೆ ಸೋಮವಾರ ಆಕೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿ ಪೊಲೀಸರು ಒರ್ವ ಶಂಕಿತ ವ್ಯಕ್ತಿ ಸಚಿನ್‌ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ಇದು ಸಾಮೂಹಿಕ ಅತ್ಯಾಚಾರ ಪ್ರಕರಣವೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಸದ್ಯ ಪ್ರಕರಣದ ತನಿಖೆ ಮುಂದುವರಿದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು