Categories: ಕರಾವಳಿ

ಅಂತರರಾಜ್ಯ ಗಾಂಜಾ ಜಾಲ ಭೇದಿಸಿದ ಮಂಗಳೂರು ಪೊಲೀಸರು

ಮಂಗಳೂರು: ನಗರ ಪೊಲೀಸರು ಅಂತರ್ ರಾಜ್ಯ ಮಟ್ಟದ ಮಾದಕವಸ್ತು ಪೂರೈಕೆ ಜಾಲವೊಂದನ್ನು ಭೇದಿಸಿ, ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.

ಆರೋಪಿಗಳಿಂದ ಸುಮಾರು ಹತ್ತು ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಕಾಸರಗೋಡು ಜಿಲ್ಲೆಯ ಮಂಜೇಶ್ವರ ಧರ್ಮನಗರ ನಿವಾಸಿ ಅಬೂಬಕ್ಕರ್ ಸಮದ್ ಅಲಿಯಾಸ್ ಸಮದ್(24), ವರ್ಕಾಡಿ ನಿವಾಸಿ ಮಹಮ್ಮದ್ ಅಸ್ತಫ್ ಅಲಿಯಾಸ್ ಅಶ್ರಫ್(30), ಕಡಂಬಾರು ದುರ್ಗಿಪಳ್ಯ ನಿವಾಸಿ ಮಹಮ್ಮದ್ ಅಫ್ರಿದ್(22) ಮತ್ತು ಮುಕ್ತಾಣ ನಿವಾಸಿ ಮಹಮದ್ ಅರ್ಷದ್(18) ಎಂಬವರನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಡಾ.ಪಿ.ಎಸ್.ಹರ್ಷ ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಆರೋಪಿಗಳಿಂದ ಒಂದು ಕಾರು, ಹತ್ತು ಕೆಜಿ ಗಾಂಜಾ ಮತ್ತು ಮೂರು ಮೊಬೈಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವರು ಅಂತರ್ ರಾಜ್ಯ ಮಟ್ಟದಲ್ಲಿ ಗಾಂಜಾ ಪೂರೈಕೆ ಜಾಲ ಹೊಂದಿದ್ದರು ಎಂದು ಅವರು ತಿಳಿಸಿದರು.

Desk

Recent Posts

ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಮೇಲೆ ಬರಲಿದೆ ಬಯೋಪಿಕ್

ಐಪಿಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ಅಣ್ಣಾಮಲೈ  ಅವರು ಬಿಜೆಪಿ ಸೇರ್ಪಡೆ ಆಗಿ ರಾಜಕೀಯಕ್ಕೆ ಕಾಲಿಟ್ಟರು. ಈಗ  ಕೊಯಿಮತ್ತೂರು ಕ್ಷೇತ್ರದಿಂದ ಬಿಜೆಪಿ…

7 mins ago

ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದ ಅರವಿಂದರ್ ಸಿಂಗ್ ಲವ್ಲಿ

ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಇತ್ತೀಚೆಗೆ ರಾಜೀನಾಮೆ ನೀಡಿದ್ದ ಅರವಿಂದರ್ ಸಿಂಗ್ ಲವ್ಲಿ ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

32 mins ago

ಕಾರು ಬೈಕಿನ ನಡುವೆ ಅಪಘಾತ; ಸವಾರ ಮೃತ್ಯು

ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು ಮತ್ತಿಬ್ಬರಿಗೆ ಪೆಟ್ಟಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ…

38 mins ago

ಪರಶುರಾಮ ಮೂರ್ತಿಯ ಕಾಮಗಾರಿ ನಡೆಸಲು ಕಾಂಗ್ರೆಸ್ ಅಡ್ಡಿ: ನವೀನ್‌  ನಾಯಕ್

ಪರಶುರಾಮ ಮೂರ್ತಿಯನ್ನು ಬಲಪಡಿಸುವ ನಿಟ್ಟಿನಲ್ಲಿ ಕಾಮಗಾರಿ ನಡೆಸಲು ಹೈಕೋರ್ಟ್ ಅನುಮತಿ ನೀಡಿದ್ದು, ಕಾಮಗಾರಿ ಆರಂಭಕ್ಕೆ ಜಿಲ್ಲಾಡಳಿತ ತಡೆಯೊಡ್ಡುವ ಮೂಲಕ ಪರೋಕ್ಷವಾಗಿ…

58 mins ago

ಬಂಡೀಪುರ ಅರಣ್ಯ ಪ್ರದೇಶದಲ್ಲಿ ಹುಲಿ ಮೃತದೇಹ ಪತ್ತೆ

ಗಂಡು ಹುಲಿಯೊಂದರ ಮೃತದೇಹ  ಬಂಡೀಪುರ ಹುಲಿ ಸಂರಕ್ಷಿತ  ಪ್ರದೇಶದ  ಮೈಸೂರು ಜಿಲ್ಲೆಯ  ಹೆಡಿಯಾಲ ಉಪ-ವಿಭಾಗದ ಹೆಬ್ಬಳ್ಳ ಗಸ್ತಿನ ಚಾಮಲಾಪುರ ಕಟ್ಟೆಯ ಅರಣ್ಯ ಪ್ರದೇಶದಲ್ಲಿ  ಪತ್ತೆಯಾಗಿದ್ದು, ವಯೋಸಹಜವಾಗಿ…

1 hour ago

15 ವರ್ಷದಿಂದ ಸಂಸದ ರಾಘವೇಂದ್ರ ಗೆದ್ದು ಏನು ಕಡೆದು ಕಟ್ಟೆಹಾಕಿದ್ದಾರೆ: ಪ್ರದೀಪ್ ಈಶ್ವರ್

ಕಳೆದ 15 ವರ್ಷದಿಂದ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಸಂಸದ ರಾಘವೇಂದ್ರ ಗೆದ್ದು ಏನು ಕಡೆದು ಕಟ್ಟೆಹಾಕಿದ್ದಾರೆ ಎಂದು ಚಿಕ್ಕಬಳ್ಳಾಪುರದ ಶಾಸಕ…

1 hour ago