News Karnataka Kannada
Monday, April 29 2024
ಕರಾವಳಿ

ಅಡಿಕೆ ನಿಷೇಧ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ರೈತರ ಪ್ರತಿಭಟನೆ

Photo Credit :

ಅಡಿಕೆ ನಿಷೇಧ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ರೈತರ ಪ್ರತಿಭಟನೆ

ಮೂಡುಬಿದಿರೆ: ಅಡಿಕೆಯನ್ನು ಬೆಳೆಸುವುದು ಕೇವಲ ವಾಣಿಜ್ಯ ಉದ್ದೇಶಕ್ಕೆ ಮಾತ್ರವಲ್ಲ, ಅದು ಶುಭ ಕಾರ್ಯಗಳಿಗೂ ಅಗತ್ಯವಾಗಿ ಬೇಕು. ಆದರೆ ಇದೀಗ ಕೇಂದ್ರ ಸರಕಾರವು ಅಡಿಕೆಯಲ್ಲಿ ಕ್ಯಾನ್ಸರ್ ಕಾರಕ ಅಂಶವಿದೆ ಎಂದು ಹೇಳುವ ಮೂಲಕ ಅಡಕೆ ಬೆಳೆಗಾರರನ್ನು ಸಂಕಷ್ಟಕ್ಕೆ ಸಿಲುಕಿಸುವ ಮೂಲಕ ನಿರ್ಲಕ್ಷ್ಯ ತೋರುತ್ತಿದೆ ಎಂದು ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಐವನ್ ಡಿ’ಸೋಜ ಆರೋಪಿದರು.   

ಅವರು ತಹಶೀಲ್ದಾರ್ ಕಚೇರಿ ಆವರಣದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯು ಹಮ್ಮಿಕೊಂಡಿದ್ದ  ಪ್ರತಿಭಟನೆಯ ನೇತೃತ್ವ  ವಹಿಸಿ ಮಾತನಾಡಿದರು. ಅಡಿಕೆಯಲ್ಲಿ ಕ್ಯಾನ್ಸರ್ ಕಾರಕ ಅಂಶವಿದೆಯೆಂಬ ನೆಪವೊಡ್ಡಿ ಅಡಿಕೆ ಉತ್ಪನ್ನಗಳ ತಯಾರಿ ಮತ್ತು ಮಾರಾಟವನ್ನು ನಿಷೇಧಿಸಲು ಮುಂದಾಗಿರುವುದಾದರೆ ಇಂಡೋನೇಶ್ಯಾ, ಶ್ರೀಲಂಕಾ ಸಹಿತ ಇತರ ರಾಷ್ಟ್ರಗಳಿಂದ ಭಾರತಕ್ಕೆ ಅಡಿಕೆಯನ್ನು ಆಮದು ಮಾಡಿಕೊಳ್ಳುತ್ತಿರುವುದು ಯಾರ ಲಾಭಿಗಾಗಿ…? ಎಂದು ಪ್ರಶ್ನಿಸಿದರು.

ಕರ್ನಾಟಕದಲ್ಲಿ ಅತೀ ಹೆಚ್ಚು ಅಡಿಕೆ ಬೆಳೆಗಾರರಿದ್ದಾರೆ. ಜಿಲ್ಲೆಯಲ್ಲಿಯೂ ಹೆಚ್ಚು ಅಡಿಕೆ ಬೆಳೆಯುವವರಿದ್ದಾರೆ. ಅಡಿಕೆಗೆ ಕೊಳೆರೋಗ ಬಂದಾಗ ರಾಜ್ಯ ಸರಕಾರವು 109 ಕೋಟಿ ರೂವನ್ನು ಅಡಿಕೆ ಬೆಳೆಗಾರರಿಗೆ ಪರಿಹಾರಧನವಾಗಿ ನೀಡಿದೆ. ಆದರೆ ಬಿಜೆಪಿಯ ಸಂಸದರು ಚುನಾವಣೆ ಬಂದಾಗ ಸಂಪಾಜೆಯಿಂದ ಮಂಗಳೂರುವರೆಗೆ ನಡಿಗೆಯನ್ನು ಕೈಗೊಳ್ಳುತ್ತಾರೆ. ಆದರೆ ಅಡಿಕೆ ಬೆಳೆಗಾರರಿಗೆ ತೊಂದರೆಯಾದಾಗ ನಮ್ಮ ಜಿಲ್ಲೆಯ ನಂ.1 ಸಂಸದರು ಕ್ರಿಕೆಟ್ ಪಂದ್ಯಾಟದಲ್ಲಿ ಪಾಲೊಂಡಿದ್ದೇನೆ ಎನ್ನುತ್ತಾರೆ. ರೈತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಸಂಸದರು ಈಗ ರೈತರಿಗೆ ಸಂಕಷ್ಟವಾದಾಗ ಯಾವುದೇ ಬೆಂಬಲ ನೀಡದಿರುವುದು ದುರಾದೃಷ್ಟಕರ ಎಂದು ಖೇದ ವ್ಯಕ್ತಪಡಿಸಿದರು.

ಅಡಿಕೆ ನಿಷೇಧ ವಿಚಾರ ಸಂಸತ್ತಿನಲ್ಲಿ ಚರ್ಚೆಯಾಗುವಾಗ ಸರ್ಕಾರ ಅಡಿಕೆ ಮಂಡಳಿ ಮಾಡಲು ಹೊರಟಿದೆ. ಅದಕ್ಕೆ ಕೇಂದ್ರ ಸರ್ಕಾರ 1 ಸಾವಿರ ಕೋಟಿ ಅನುದಾನ ನೀಡಬೇಕು. ಅವೈಜ್ಞಾನಿಕವಾಗಿ ಅಡಿಕೆ ನಿಷೇಧಿಸಿದರೆ ಅಡಿಕೆ ಬೆಳೆಗಾರರ ಸಾವಿಗೆ ಕೇಂದ್ರ ಸರ್ಕಾರವೇ ಹೊಣೆಯಾಗುತ್ತದೆ ಎಂದರು.

ಜೆಡಿಎಸ್ ಮುಖಂಡ ಅಮರನಾಥ ಶೆಟ್ಟಿ ಮಾತನಾಡಿ, ಎಲ್ಲಾ ಪಕ್ಷಗಳಲ್ಲಿಯೂ ಭ್ರಷ್ಠಾಚಾರಿಗಳಿದ್ದಾರೆ. ಕಾಂಗ್ರೆಸ್ ಬಿಜೆಪಿಯನ್ನು, ಬಿಜೆಪಿ ಕಾಂಗ್ರೆಸ್ ನ್ನು ಬೈಯ್ಯುವುದಲ್ಲ. ಬದಲಾಗಿ ಅಭಿವೃದ್ಧಿ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಿ. ಅಡಕೆಯನ್ನು ಕ್ಯಾನ್ಸರ್ ಕಾರಕ ಎಂಬ ವರದಿಯನ್ನು ಪುನರ್ ಪರಿಶೀಲಿಸಿ ಬೆಳೆಗಾರರಿಗೆ ಉಂಟಾಗುವ ಸಂಕಷ್ಟದಿಂದ ಪಾರು ಮಾಡುವಂತೆ ಆಗ್ರಹಿಸಿದರು.  

ಅಡಕೆಯನ್ನು ಕ್ಯಾನ್ಸರ್ ಕಾರಕ ಎಂಬ ವರದಿಯನ್ನು ಪುನರ್ ಪರಿಶೀಲಿಸಿ ಬೆಳೆಗಾರರಿಗೆ ಉಂಟಾಗುವ ಸಂಕಷ್ಟದಿಂದ ಪಾರು ಮಾಡುವ ಬಗ್ಗೆ ಮತ್ತು ಅಡಕೆ ಮಂಡಲಿ ಕೇಂದ್ರ ಮಟ್ಟದಲ್ಲಿ ಸ್ಥಾಪಿಸುವ ಬಗ್ಗೆ ತಹಶೀಲ್ದಾರ್ ಮಹಮ್ಮದ್ ಇಸಾಕ್ ಮೂಲಕ ಜಿಲ್ಲಾಧಿಕಾರಿಗೆ ಮನವಿಯನ್ನು ಸಲ್ಲಿಸಲಾಯಿತು.

ಜಿಪಂ ಸದಸ್ಯ ಕಾವು ಹೇಮನಾಥ ಶೆಟ್ಟಿ,  ಪುರಸಭಾ ನಾಮ ನಿರ್ದೇಶಿತ ಸದಸ್ಯ ಆಲ್ವಿನ್ ಮೆನೇಜಸ್, ತಾಲೂಕು ಪಂಚಾಯತಿ ಮಾಜಿ ಸದಸ್ಯರಾದ ರುಕ್ಕಯ ಪೂಜಾರಿ, ಲಾಜರಸ್ ಡಿಕೋಸ್ತಾ, ವಕೀಲ ಪದ್ಮಪ್ರಸಾದ್ ಜೈನ್ ಹಾಗೂ ರೈತರ ಮುಖಂಡರು ಪಾಲ್ಗೊಂಡರು. 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
183

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು