ಬಂಟ್ವಾಳ: ವಿಟ್ಲ ಸಮೀಪದ ಮೇಗಿನಪೇಟೆ ಎಂಬಲ್ಲಿ ಜೀಪ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ವಿಟ್ಲ ಕಸಬಾ ಗ್ರಾಮದ ಚಂದಳಿಕೆ ಸಿಪಿಸಿಆರ್ ಐ ಸಮೀಪದ ನಿವಾಸಿ ಅಶ್ವಿನ್ (20) ಮೃತಪಟ್ಟ ಬೈಕ್ ಸವಾರ. ಇವರು ಎಂದಿನಂತೆ ವಿಟ್ಲ ಪೇಟೆಯಿಂದ ಚಂದಳಿಕೆ ಮನೆ ಕಡೆಗೆ ತೆರಳುತ್ತಿದ್ದಾಗ ಮೇಗಿನಪೇಟೆ ಬಳಿ ರಸ್ತೆಗೆ ಕ್ರಾಸ್ ಆಗುತ್ತಿದ್ದ ಜೀಪ್ ಗೆ ಢಿಕ್ಕಿ ಹೊಡೆದು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಇವರನ್ನು ವಿಟ್ಲ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ್ದು, ಹೆಚ್ವಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿತ್ತು.
ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.