ಮೂಡುಬಿದಿರೆ : ದಶಕಗಳ ಹಿಂದೆ (1990-1992) ಅಯೋಧ್ಯೆ ಶ್ರೀ ರಾಮ ಮಂದಿರ ನಿರ್ಮಾಣದ ಭೂಮಿ ಪೂಜೆಯ ಪ್ರಯುಕ್ತ ಅಯೋಧ್ಯೆಗೆ ಕರಸೇವಕರಾಗಿ ತೆರಳಿದ್ದ 14 ಮಂದಿ ಕರಸೇವಕರನ್ನು ಬಿಜೆಪಿ ಮೂಲ್ಕಿ-ಮೂಡುಬಿದಿರೆ ಮಂಡಲದಿಂದ ಗುರುವಾರ ಕೋಟೆಬಾಗಿಲು ಶ್ರೀ ವೀರಮಾರುತಿ ದೇವಸ್ಥಾನದಲ್ಲಿ ಗೌರವಿಸಲಾಯಿತು.
ಎಂ ಅನಂತ ಪ್ರಭು. ಮಾಧವರಾಯ ಕಾಮತ್, ಎಂ ತುಕರಾಮ ಮಲ್ಯ, ಪ್ರಸನ್ನ ವಿ.ಶೆಣೈ, ಶೀನ ಸುವರ್ಣ, ಪದ್ಮನಾಭ ಗಾಂಧಿನಗರ, ರವೀಂದ್ರ ಪೈ ಕಲ್ಲಬೆಟ್ಟು. ಬಿ ವಿಶ್ವನಾಥ್ ಕಾಮತ್ ಬೋಳ, ನಾಗೇಶ್ ಗೌಡ ಮುಚ್ಚೂರು, ಈಶ್ವರ ಭಟ್ ಕಾನ, ಮನೋಹರ್ ಮಲ್ಯ. ಮಾಧವರಾಯ ಪ್ರಭು ನಿಡ್ಡೋಡಿ, ಅವರನ್ನು ದೇವಸ್ಥಾನದಲ್ಲಿ ಹಾಗೂ ಬೆಳುವಾಯಿ ಸೀತಾರಾಮ ಆಚಾರ್ಯ ಅವರನ್ನು ಅವರ ಕಛೇರಿಯಲ್ಲಿ ಗೌರವಿಸಲಾಯಿತು. ವಿಧಿವಶರಾಗಿರುವ ಮೂವರು ಕರಸೇವಕರ ಪರವಾಗಿ ಅವರ ಮನೆಗೆ ತೆರಳಿ ಕುಟುಂಬದವರನ್ನು ಗೌರವಿಸಲಾಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ, ಮಂಡಲ ಅಧ್ಯಕ್ಷ ಸುನಿಲ್ ಆಳ್ವ, ಸಂಘದ ಪ್ರಮುಖರಾದ ವಿವೇಕಾನಂದ ಕಾಮತ್ ಸಂಪಿಗೆ, ಮಂಜುನಾಥ್ ಬೆಳುವಾಯಿ, ಬಿಜೆಪಿಯ ಜಿಲ್ಲಾ ಉಪಾಧ್ಯಕ್ಷ ಈಶ್ವರ್ ಕಟೀಲ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲ್ ಶೆಟ್ಟಿಗಾರ್, ಕೇಶವ ಕರ್ಕೇರ, ಸುಕೇಶ್ ಶೆಟ್ಟಿ ಲಕ್ಷ್ಮಣ ಪೂಜಾರಿ, ವಿಶ್ವ ಹಿಂದೂ ಪರಿಷತ್ ಕಾರ್ಯಾಧ್ಯಕ್ಷ ಶ್ಯಾಮ್ ಹೆಗ್ಡೆ, ಎಸ್.ಎನ್ ಬೋರ್ಕರ್, ಮಂಡಲ ಬಿಜೆಪಿಯ ರೈತ ಮೋರ್ಚಾ ಅಧ್ಯಕ್ಷ ಸೋಮನಾಥ್ ಕೋಟ್ಯಾನ್, ಪುರಸಭೆಯ ಸದಸ್ಯರಾದ ಪ್ರಸಾದ್ ಕುಮಾರ್, ನಾಗರಾಜ ಪೂಜಾರಿ. ಬಜರಂಗದಳದ ಸುಚೇತನ್ ಜೈನ್, ಶರತ್ ಲಾಡಿ, ಮೂಡುಬಿದಿರೆ ತಾಪಂ ಸದಸ್ಯ ಸಂತೋಷ್ ಬೆಳುವಾಯಿ, ಕೆ.ಆರ್ ಪಂಡಿತ್, ರಾಜೇಶ್ ಶೆಟ್ಟಿ. ರಾಘವ ಹೆಗ್ಡೆ, ಸುಭಾಷ್ ನಗರ ಹಾಗೂ ಸಂಘ ಪರಿವಾರದ ಕಾರ್ಯಕರ್ತರು ಉಪಸ್ಥಿತರಿದ್ದರು.
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…