ಮಂಗಳೂರು: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವಂತಹ ಒತ್ತಡದ ಪರಿಣಾಮವಾಗಿ ನಾಳೆ(ಮೇ12)ಯಿಂದ ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆಗಳು ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಸಮುದ್ರದಲ್ಲಿ ಈಗಾಗಲೇ ಬಲವಾದ ಗಾಳಿ ಬೀಸುತ್ತಿರುವ ಕಾರಣ ಅಲೆಗಳ ಅಬ್ಬರ ಹೆಚ್ಚಾಗಿದೆ. ಕೆಲವೊಂದು ಕಡೆಗಳಲ್ಲಿ ಕಡಲ್ಕೊರೆತ ಕೂಡ ಉಂಟಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಅಲೆಗಳ ಅಬ್ಬರವು ಹೆಚ್ಚಾಗಿರುವ ಕಾರಣದಿಂದಾಗಿ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಸಲಾಗಿದೆ.