News Karnataka Kannada
Monday, April 29 2024
ಕರಾವಳಿ

ಅರಬ್ಬೀ ಸಮುದ್ರದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣೆಗೆ ಮುಂದಾದ ನೌಕಾ ಸೇನಾ ಹೆಲಿಕಾಪ್ಟರ್

Photo Credit :

ಅರಬ್ಬೀ ಸಮುದ್ರದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣೆಗೆ ಮುಂದಾದ ನೌಕಾ ಸೇನಾ ಹೆಲಿಕಾಪ್ಟರ್

ಮಂಗಳೂರು : ಕೆಲವು ದಿನಗಳಿಂದ ಅರಬ್ಬೀ ಸಮುದ್ರದಲ್ಲಿ ಮೂಡಿರುವ ಚಂಡಮಾರುತದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ವಿಳಂಬವಾಗಿರುವುದರಿಂದ ರಾಜ್ಯ ಸರ್ಕಾರ ರಕ್ಷಣಾ ಕಾರ್ಯಚರಣೆಗೆ ನೌಕಾ ಸೇನಾ ಹೆಲಿಕಾಪ್ಟರ್ ಬಳಸಲು ಅನುಮತಿ ನೀಡಿದೆ ಎಂದು ಮಂಗಳೂರು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಮಾಹಿತಿ ನೀಡಿದ್ದಾರೆ.

 

ಕಾಪು ಕಡಲ ತೀರದಿಂದ‌ 15 ನಾಟೆಕಲ್ ಮೈಲ್ ದೂರದಲ್ಲಿರುವ ಟಗ್ ಕೋರಮಂಡಲ್ ಎಂಬ ಹೆಸರಿನ ಟಗ್ ನಲ್ಲಿರುವ 9 ಕಾರ್ಮಿಕರುಕಲ್ಲು ಬಂಡೆಗೆ ಸಿಲುಕಿಹಾಕಿಕೊಂಡಿದ್ದಾರೆ. ಅವರನ್ನು ರಕ್ಷಿಸಲು ಅನೇಕ ಪ್ರಯತ್ನಗಳನ್ನು ಮಾಡುತ್ತಿದ್ದು, ನೌಕಾಪಡೆಯ ಸಹಾಯ ಪಡೆಯಲಾಗುತ್ತಿದೆ.

 

ಭಾರೀ ಅಲೆಗಳ ಅಬ್ಬರದಿಂದ ಕೋಸ್ಟ್ ಗಾರ್ಡ್ ಸಿಬ್ಬಂದಿ ಕಾರ್ಯಾಚರಣೆ ಮಾಡಲು ವಿಳಂಬವಾಗುತ್ತಿದೆ. ನೌಕಾಪಡೆಯ ಹೆಲಿಕಾಪ್ಟರ್ ಬಳಸಿ ಕಾರ್ಮಿಕರ ರಕ್ಷಣೆಗೆ ಸಿದ್ದತೆ ನಡೆಸಲಾಗುತ್ತದೆ. ಕಾರವಾರದ ನೌಕಾ ನೆಲೆಯಿಂದ ಮಂಗಳೂರಿಗೆ ಹೆಲಿಕಾಪ್ಟರ್ ಬರಲಿದೆ. ಸದ್ಯ ವಿಪರೀತ ಗಾಳಿಯಿದ್ದು,ಗಾಳಿಯ ವೇಗ ಕಡಿಮೆಯಾದ ಬಳಿಕ ಹೆಲಿಕಾಪ್ಟರ್ ಬಳಸಿ ರಕ್ಷಣೆ ಕಾರ್ಯಚರಣೆ ಮುಂದುವರೆಯಲಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು