News Karnataka Kannada
Saturday, April 27 2024
ಕರಾವಳಿ

ಅಸಾನಿ ಚಂಡಮಾರುತ: ಹಲವೆಡೆ ವಿಮಾನ ಹಾಗೂ ರೈಲು ಸಂಚಾರ ರದ್ದು

Asani Cyclone
Photo Credit :

ಮಂಗಳೂರು: ಅಸಾನಿ ಚಂಡಮಾರುತದಿಂದಾಗಿ ಕರಾವಳಿ ರಾಜ್ಯಗಳು ತತ್ತರಿಸಿವೆ. ಭಾರೀ ಗಾಳಿ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ಅಸಾನಿ ಚಂಡಮಾರುತ ವಿಮಾನ ನಿಲ್ದಾಣದ ಕಾರ್ಯಾಚರಣೆಗಳ ಮೇಲೆ ತೀವ್ರ ಪ್ರಭಾವ ಬೀರಿದೆ.

ಈಗಾಗಲೇ ಹಲವಾರು ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಇನ್ನು ಕೆಲವು ವಿಮಾನಗಳ ಮಾರ್ಗ ಬದಲಾವಣೆಯಾಗಿದೆ. ಮಂಗಳವಾರದವರೆಗೆ 19 ವಿಮಾನ ಸೇವೆಗಳನ್ನು ರದ್ದುಗೊಳಿಸಲಾಗಿತ್ತು.

ಬುಧವಾರ, ಇಂಡಿಗೋ ಸಂಸ್ಥೆ 23 ವಿಮಾನಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದೆ. ದೆಹಲಿ-ವಿಶಾಖಪಟ್ಟಣಂ, ಬೆಂಗಳೂರು-ವಿಶಾಖಪಟ್ಟಣಂ ಸೇವೆಗಳನ್ನು ರದ್ದುಗೊಳಿಸಲಾಗಿದೆ. ಏರ್ ಇಂಡಿಯಾ ಮುಂಬೈ-ರಾಯಪುರ ಮತ್ತು ವಿಶಾಖಪಟ್ಟಣ-ದೆಹಲಿ ಸೇವೆಗಳನ್ನು ರದ್ದುಗೊಳಿಸಿದೆ. ವಿಮಾನಗಳು ಲ್ಯಾಂಡಿಂಗ್‌ ಆಗಲು ಪ್ರತಿಕೂಲ ಹವಾಮಾನ ಕಾರಣ ಎಂದು ಏರ್‌ಪೋರ್ಟ್‌ ಅಧಿಕಾರಿಗಳು ತಿಳಿಸಿದ್ದಾರೆ.

ಈ ನಡುವೆ ದಕ್ಷಿಣ ಮಧ್ಯ ರೈಲ್ವೆ ಬುಧವಾರ ಒಟ್ಟು 37 ರೈಲುಗಳನ್ನು ರದ್ದುಗೊಳಿಸಲಾಗಿದೆ. ಕೆಲವನ್ನು ರಿಷೆಡ್ಯೂಲ್‌ ಮಾಡಲಾಗಿದೆ. ವಿಜಯವಾಡ-ಮಚಿಲಿಪಟ್ಟಣಂ, ಮಚಿಲಿಪಟ್ಟಣಂ-ವಿಜಯವಾಡ, ವಿಜಯವಾಡ-ನರಸಾಪುರ, ನರಸಾಪುರ-ನಿಡದವೋಲು, ನಿಡದವೋಲು-ನರಸಾಪುರ, ನರಸಾಪುರ-ವಿಜಯವಾಡ, ವಿಜಯವಾಡ-ನರಸಾಪುರ, ನಿಡದವೋಲು-ಭೀಮಾವರಂ ಜಂಕ್ಷನ್, ಭೀಮಾವರಂ ಜಂಕ್ಷನ್- ಮಚಲಿಪಟ್ಟಣಂ-ಗುಡಿವಾಡ, ಭೀಮಾವರಂ ಜಂಕ್ಷನ್-ಮಚಿಲಿಪಟ್ಟಣಂ, ಗುಡಿವಾಡ-ಮಚಿಲಿಪಟ್ಟಣಂ, ನರಸಾಪುರ-ಗುಂಟೂರು, ಗುಂಟೂರು-ನರಸಾಪುರ, ಕಾಕಿನಾಡ ಬಂದರು-ವಿಜಯವಾಡ ರೈಲುಗಳು ರದ್ದಾಗಿದೆ. ಇದರಿಂದಾಗಿ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ಎದುರಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು