Categories: ಕರಾವಳಿ

ಆತ್ಮೀಯ ಸ್ನೇಹಿತರೇ ತಾ.ಪಂ.ಚುನಾವಣೆಯಲ್ಲಿ ಎದುರಾಳಿಗಳು!

ಬಂಟ್ವಾಳ: ತಾಲೂಕಿನ ಪ್ರತಿಷ್ಠಿತ ತಾ.ಪಂ. ಕ್ಷೇತ್ರವೆಂದೇ ಬಿಂಬಿತವಾಗಿರುವ ಸಂಗಬೆಟ್ಟು ತಾ.ಪಂ.ಕ್ಷೇತ್ರದ ಉಪಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಸ್ನೇಹಿತರೊಳಗೆ ಭಾರೀ ಜಿದ್ದಾಜಿದ್ದಿನ ಸ್ಪರ್ಧೆಯ ಲಕ್ಷಣ ಕಂಡುಬಂದಿದೆ. ಅ. 28ರಂದು ಮತದಾರರು ತನ್ನ ತೀರ್ಪು ನೀಡಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ದಿನೇಶ್ ಸುಂದರ್ ಶಾಂತಿ ಹಾಗೂ ಬಿಜೆಪಿ ಅಭ್ಯರ್ಥಿಯಾಗಿ ಪ್ರಭಾಕರ ಪ್ರಭು ಅವರಿಬ್ಬರೇ ಕಣದಲ್ಲಿರುವುದರಿಂದ ಉಪಸಮರದ ಕಾವು ದಿನದಿಂದ ದಿನಕ್ಕೆ ಏರುತ್ತಿದೆ.

ಆತ್ಮೀಯ ಸ್ನೇಹಿತರಿವರು..
ಒಂದು ಕಾಲದಲ್ಲಿ ಉಭಯ ಪಕ್ಷದ ಅಭ್ಯರ್ಥಿಗಳಿಬ್ಬರು ಆತ್ಮೀಯ ಸ್ನೇಹಿತರು. ಆದರೆ ಈಗ ಇಬ್ಬರು ಪರಸ್ಪರ ಎದುರಾಳಿಯಾಗಿ ಚುನಾವಣಾ ಸ್ಪರ್ಧೆಯಲ್ಲಿದ್ದು, ಚುನಾವಣಾ ಕಣ ರಂಗೇರುವಂತೆ ಮಾಡಿದೆ. ಪ್ರಭಾಕರ ಪ್ರಭು ಸಂಗಬೆಟ್ಟು ಗ್ರಾ.ಪಂ. ಉಪಾಧ್ಯಕ್ಷ, ಅಧ್ಯಕ್ಷರಾಗಿ ತಾ.ಪಂ. ಸದಸ್ಯರಾದವರು, ಪಂಚಾಯತ್ ರಾಜ್ ವ್ಯವಸ್ಥೆಯ ಬಗ್ಗೆಯು ಜ್ಞಾನವುಳ್ಳವರು, ಎರಡು ದಶಕಗಳ ರಾಜಕೀಯ ಅನುಭವ ಜೊತೆಗೆ ಪದವೀಧರರೂ ಹೌದು, ಸ್ಥಳೀಯವಾಗಿ ಪ್ರಭಾವಿ ಯುವನಾಯಕ ಎಂಬುದರಲ್ಲಿ ಎರಡು ಮಾತಿಲ್ಲ, ಹಾಗೆಯೇ ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಅವರು ಸಂಗಬೆಟ್ಟುವಿನ ಪಕ್ಕದ ಕುಕ್ಕಿಪ್ಪಾಡಿ ಗ್ರಾ.ಪಂ.ನ ಹಾಲಿ ಅಧ್ಯಕ್ಷರು ಅಗಿದ್ದಾರೆ. ಒಂದಷ್ಟು ರಾಜಕೀಯ ಅನುಭವ ಪಡೆದವರು. ಒಂದು ಕಾಲದಲ್ಲಿ ಒಂದೇ ಪಕ್ಷದಲ್ಲಿದ್ದು ಗಳಸ್ಯ -ಕಂಠಸ್ಯ ಸ್ನೇಹಿತರಾಗಿದ್ದ ಇವರು, ಸಂಗಬೆಟ್ಟುತಾ.ಪಂ. ಉಪಸಮರದಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಈ ಉಪಚುನಾವಣೆ ಉಭಯಪಕ್ಷಗಳಿಗೂ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ.

ಘಟಾನುಘಟಿ ನಾಯಕರೇ ಪ್ರಚಾರ ಕಾರ್ಯದಲ್ಲಿ
ಚುನಾವಣೆಗೆ ದಿನ ಹತ್ತಿರವಾಗುತ್ತಿರುವಂತೆಯೇ ಕ್ಷೇತ್ರ ವ್ಯಾಪ್ತಿಯಲ್ಲಿ ಎರಡೂ ರಾಜಕೀಯ ಪಕ್ಷಗಳ ಪ್ರಚಾರ ಭರಾಟೆ ಜೋರಾಗಿದೆ, ಬಿಜೆಪಿಯಿಂದ ಶಾಸಕ ರಾಜೇಶ್ ನಾಯ್ಕ್ ಸ್ವತಃ ಪ್ರಚಾರ ಕಾರ್ಯದಲ್ಲಿ ತೊಡಗಿದ್ದು, ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್, ಹರಿಕೃಷ್ಣ ಬಂಟ್ವಾಳ, ಗೋವಿಂದ ಪ್ರಭು, ದೇವದಾಸ ಶೆಟ್ಟಿ ಸಹಿತ ಜಿಲ್ಲೆಯ ನಾಯಕರೂ ಮನೆಮನೆ ಭೇಟಿ ಮೂಲಕ ಪ್ರಭಾಕರ ಪ್ರಭು ಪರ ಮತಯಾಚನೆಯಲ್ಲಿ ತೊಡಗಿದ್ದಾರೆ. ಕಾಂಗ್ರೆಸ್ ನಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರುಗಳಾದ ಬೇಬಿಕುಂದರ್, ಸುದೀಪ್ ಶೆಟ್ಟಿ, ಜಿ.ಪಂ.ಸದಸ್ಯರಾದ ಚಂದ್ರಪ್ರಕಾಶ ಶೆಟ್ಟಿ, ಮಮತಾಗಟ್ಟಿ, ಪದ್ಮಶೇಖರ್ ಜೈನ್, ಮಂಜುಳಾ ಮಾಧವಮಾವೆ, ಎಂಎಸ್.ಮಹಮ್ಮದ್, ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಮಾಯಿಲಪ್ಪ ಸಾಲ್ಯಾನ್ ಸೇರಿದಂತೆ ಕಾಂಗ್ರೇಸ್ ನಾಯಕರ ದಂಡು ಬಿರುಸಿನ ಮತಯಾಚನೆ ನಡೆಯುತ್ತಿದ್ದು, ಸಂಗಬೆಟ್ಟು ತಾ.ಪಂ. ಕ್ಷೇತ್ರವನ್ನು ಕಾಂಗ್ರೇಸ್ ಪಕ್ಷದಲ್ಲೇ ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.

ಮತಯಂತ್ರ ಪರಿಶೀಲನೆ
ಸಂಗಬೆಟ್ಟು ತಾಲೂಕು ಪಂಚಾಯತ್ ಉಪಚುನಾವಣೆ ಹಿನ್ನೆಲೆಯಲ್ಲಿ ಮಂಗಳವಾರ ಬಿ.ಸಿ.ರೋಡಿನ ಮಿನಿವಿಧಾನಸೌಧದಲ್ಲಿ ಇವಿಎಂ ಮತಯಂತ್ರ ಅಳವಡಿಕೆ ಹಾಗೂ ಪರಿಶೀಲನಾ ಕಾರ್ಯ ನಡೆಯಿತು.
ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ, ಚುನಾವಣಾಧಿಕಾರಿ ನಾರಾಯಣ ಶೆಟ್ಟಿ, ಮಾಸ್ಟರ್ ಟ್ರೈನರ್ ನಾರಾಯಣ ಭಂಡಾರಿ, ಸಹಾಯಕ ಚುನಾವಣಾಧಿಕಾರಿ ಲಕ್ಷ್ಮಣ್, ಮತಗಟ್ಟೆಯ ಸೆಕ್ಟರ್ ಅಧಿಕಾರಿ ಮತ್ತಡಿ ಇವಿಎಂ ಮತಯಂತ್ರ ಅಳವಡಿಕಾ ಕಾರ್ಯದಲ್ಲಿ ತೊಡಗಿಕೊಂಡರು.

ಸಂಗಬೆಟ್ಟು ತಾಪಂ ಕ್ಷೇತ್ರ ಸಂಗಬೆಟ್ಟು ಮತ್ತು ಕುಕ್ಕಿಪ್ಪಾಡಿ ಗ್ರಾಮವನ್ನು ಒಳಗೊಂಡಿದ್ದು,11 ಬೂತ್ ನಲ್ಲಿ ಮತದಾನ ನಡೆಯಲಿದೆ. ಅಂಗನವಾಡಿಕೇಂದ್ರ, ಸರಕಾರಿ, ಖಾಸಗಿಶಾಲೆ, ಸಮುದಾಯಭವನದಲ್ಲಿ ಮತಗಟ್ಟೆಯನ್ನು ಗುರುತಿಸಲಾಗಿದೆ. ಇದರಲ್ಲಿ 8 ಅತೀ ಸೂಕ್ಷ್ಮ ಹಾಗೂ 3 ಸಾಮಾನ್ಯ ಮತಗಟ್ಟೆಯನ್ನಾಗಿ ಗುರುತಿಸಲಾಗಿದೆ ಎಂದು ತಹಶೀಲ್ದಾರ್ ಅವರು ಮಾಹಿತಿ ನೀಡಿದ್ದಾರೆ.

ಸಂಗಬೆಟ್ಟು ಕ್ಷೇತ್ರದಲ್ಲಿ 4643 ಪುರುಷರು, 4722 ಮಹಿಳೆಯರು ಸೇರಿ ಒಟ್ಟು 9365 ಮತದಾರರು ತಮ್ಮ ಹಕ್ಕನ್ನು ಚಲಾಯಿಸುವರು. ಚುನಾವಣೆಗೆ ತಾಲೂಕಾಳಿತ ಸಕಲ ಪೂರ್ವತಯಾರಿಯನ್ನು ಮಾಡಿಕೊಂಡಿದ್ದು, ಶಾಂತ ಮತದಾನಕ್ಕೆ ಸಿದ್ಧತೆಯನ್ನು ನಡೆಸಿದೆ ಎಂದು ತಹಶೀಲ್ದಾರ್ ಅವರು ಮಾಹಿತಿ ನೀಡಿದ್ದಾರೆ.

 

Desk

Recent Posts

ಅಕ್ಷಯ ತೃತೀಯ ದಿನದಂದು ಚಿನ್ನ, ಬೆಳ್ಳಿ ದರ ಪಟ್ಟಿ ಹೀಗಿದೆ!

ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…

9 mins ago

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

8 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

8 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

8 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

8 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

10 hours ago