ಮಂಗಳೂರು: ಎನ್ ಐ ಟಿ ಕೆಯ ವಿದ್ಯಾರ್ಥಿಯೊಬ್ಬ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ಶನಿವಾರ ರಾತ್ರಿ ವೇಳೆ ಮಂಗಳೂರಿನ ಸುರತ್ಕಲ್ ನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಮಹಾರಾಷ್ಟ್ರದ ಆನಂದ ಪಾಠಕ್ ಎಂದು ಗುರುತಿಸಲಾಗಿದೆ.
ಈತ ಮೂರನೇ ವರ್ಷದ ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿಯಾಗಿದ್ದಾನೆ. ಪಠ್ಯೇತರ ಚಟುವಟಿಕೆ ಯಾದ ಮ್ಯೂಸಿಕಲ್ ಕ್ಲಬ್ ನ ತರಗತಿಗಾಗಿ 6ನೆಯ ಮಹಡಿಗೆ ತೆರಳಿದ್ದ. ಮೆಕ್ಯಾನಿಕಲ್ ವಿಭಾಗದ ಪ್ರೊಫೆಸರ್ ಒಬ್ಬರು ಹಾಜರಾತಿ ಕೊರತೆಯ ಕುರಿತಂತೆ ವಿದ್ಯಾರ್ಥಿ ಆನಂದ್ ಪಾಠಕ್ಕೆ ಗಂಭೀರವಾದ ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ.
ಈ ಭೀತಿಯಿಂದ ಆತ ಈ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದೆ. ಸುರತ್ಕಲ್ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ವಿದ್ಯಾರ್ಥಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸಾಗಿಸಿದ್ದಾರೆ.