News Karnataka Kannada
Friday, May 10 2024
ಕರಾವಳಿ

ಉಜಿರೆ ಟಿಬಿ ಆಸ್ಪತ್ರೆಯನ್ನು ಕ್ವಾರಂಟೈನ್ ಕೇಂದ್ರವಾಗಿಸಲು ವಿರೋಧ

Photo Credit :

ಉಜಿರೆ ಟಿಬಿ ಆಸ್ಪತ್ರೆಯನ್ನು ಕ್ವಾರಂಟೈನ್ ಕೇಂದ್ರವಾಗಿಸಲು ವಿರೋಧ

ಬೆಳ್ತಂಗಡಿ: ಉಜಿರೆ ಟಿ.ಬಿ ಆಸ್ಪತ್ರೆಯನ್ನು ಕ್ವಾರಂಟೈನ್ ಕೇಂದ್ರವಾಗಿಸಲು ಸಿದ್ಧತೆ ನಡೆಸುತ್ತಿರುವುದನ್ನು ಗಮನಿಸಿ ಸ್ಥಳೀಯ ಕುಂಟಿನಿ ಪ್ರದೇಶದ ನಿವಾಸಿಗಳು ವಿರೋಧಿಸಿರುವ ಘಟನೆ ಉಜಿರೆ ಸನಿಹ ಗುರುವಾರ ನಡೆದಿದೆ.

ತುರ್ತು ಅವಶ್ಯಕತೆಗಾಗಿ ಆಸ್ಪತ್ರೆಯನ್ನು ಕ್ವಾರಂಟೈನ್ ಕೇಂದ್ರಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದ ವತಿಯಿಂದ ನೀಡಿದ್ದು, ಇದರಂತೆ ಜಿಲ್ಲಾಧಿಕಾರಿಗಳು, ಶಾಸಕ ಹರೀಶ್ ಪೂಂಜಾ ಹಾಗೂ ತಾಲೂಕು ಆಡಳಿತ ಟಿ.ಬಿ ಆಸ್ಪತ್ರೆಯನ್ನು ಕ್ವಾರಂಟೈನ್ ಕೇಂದ್ರವನ್ನಾಗಿಸಲು ಸಿದ್ಧತೆ ನಡೆಸುತ್ತಿದ್ದರು. ಇದರ ಮಾಹಿತಿ ತಿಳಿದು ಸ್ಥಳೀಯರು, ಇದರ ಸುತ್ತಮುತ್ತ ಚರಂಡಿ ವ್ಯವಸ್ಥೆ ಸರಿಪಡಿಸಬೇಕು ಮತ್ತು ಸೂಕ್ತ ಭದ್ರತೆ ಒದಗಿಸಬೇಕು ಎಂದು ಗುರುವಾರ ಬೆಳ್ತಂಗಡಿ ಠಾಣೆಗೆ ಮನವಿ ಮಾಡಿದ್ದಾರೆ.

ಜಿಲ್ಲಾಧಿಕಾರಿಗಳ ಆದೇಶದಂತೆ ಟಿ.ಬಿ ಆಸ್ಪತ್ರೆಯನ್ನು ಕ್ವಾರಂಟೈನ್ ಕೇಂದ್ರವಾಗಿ ಮಾಡಲು ಸೂಚಿಸಿದ್ದು ಇದರಂತೆ ನಾನು ಮತ್ತು ತಾಲೂಕು ವೈದ್ಯಾಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ ವರದಿ ನೀಡಿದ್ದೇವೆ. ಸ್ಥಳಿಯರು ಕೆಲವರು ವಿರೋಧ ವ್ಯಕ್ತಪಡಿಸಿದ್ದು ಈ ಬಗ್ಗೆ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳುತ್ತಾರೆ ಎಂದು ತಹಸೀಲ್ದಾರ್ ಮಹೇಶ್ ಜೆ. ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು