ಮಂಗಳೂರು: ಕಾಲೇಜು ವಿದ್ಯಾರ್ಥಿ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಮಾಸ್ತಿಕಟ್ಟೆಯಲ್ಲಿ ಗುರುವಾರ ನಡೆದಿದೆ.
ನಗರದ ಸಂತ ಅಲೋಶಿಯಸ್ ಕಾಲೇಜಿನ ದ್ವಿತೀಯ ಪಿಯುಸಿ ಸೈನ್ಸ್ ವಿದ್ಯಾರ್ಥಿ ಪ್ರತೀಕ್ (18 ) ಆತ್ಮಹತ್ಯೆಗೈದ ವಿದ್ಯಾರ್ಥಿ.
ತಂದೆ ಕಮಲ್ ದಾಸ್ ಹಾಗೂ ತಾಯಿ ಪದ್ಮಾಕ್ಷಿ ಕಂಕನಾಡಿಯ ಖಾಸಗಿ ಕೋ-ಆಪರೇಟಿವ್ ಬ್ಯಾಂಕ್ ಉದ್ಯೋಗಿಗಳಾಗಿದ್ದು , ಪ್ರತೀಕ್ ಗುರುವಾರ ತರಗತಿಗೆ ರಜೆ ಎಂದು ಮನೆಯಲ್ಲಿ ಉಳಿದುಕೊಂಡಿದ್ದ ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ.
ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.