News Karnataka Kannada
Sunday, May 12 2024
ಕರಾವಳಿ

ಎಂಆರ್ ಪಿಎಲ್ ನಲ್ಲಿ ಕರ್ನಾಟಕದ ಕಡೆಗಣನೆ ವಿರುದ್ಧ ಪ್ರತಿಭಟನೆ”; ಬಾವಾ ಎಚ್ಚರಿಕೆ

Photo Credit :

 ಎಂಆರ್ ಪಿಎಲ್ ನಲ್ಲಿ ಕರ್ನಾಟಕದ ಕಡೆಗಣನೆ ವಿರುದ್ಧ ಪ್ರತಿಭಟನೆ

ಮಂಗಳೂರು: ‘ದಕ್ಷಿಣ ಕನ್ನಡ ಜಿಲ್ಲೆಯ ಪೆಟ್ರೋಕೆಮಿಕಲ್ ಸ್ಥಾವರ ಎಂಆರ್ ಪಿಎಲ್ ನಲ್ಲಿ ಸ್ಥಳೀಯ ಉದ್ಯೋಗಿಗಳಿಗೆ ಪ್ರಾಶಸ್ತ್ಯ ನೀಡದೇ ಉತ್ತರ ಭಾರತ ಮೂಲದ ಉದ್ಯೋಗಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗಿದೆ. ಸ್ಥಳೀಯವಾಗಿ ಕೃಷಿಭೂಮಿಯನ್ನು ಪಡೆದು ನಿರ್ಮಾಣವಾಗಿರುವ ಎಂಆರ್ ಪಿಎಲ್ ನಲ್ಲಿ ಉದ್ಯೋಗ ನಿರ್ವಹಿಸಲು ಜಿಲ್ಲೆಯಲ್ಲಿ ಸಾಕಷ್ಟು ಸಂಖ್ಯೆಯ ವಿದ್ಯಾವಂತ ಯುವಕ ಯುವತಿಯರಿದ್ದರೂ ಸ್ಥಳೀಯರನ್ನು ಗಣನೆಗೆ ತೆಗೆದುಕೊಳ್ಳದೆ ನೇಮಕಾತಿ ಮಾಡಿರುವುದು ಖಂಡನೀಯ. ಸರೋಜಿನಿ ಮಹಿಷಿ ವರದಿಯಲ್ಲಿ ಸ್ಥಳೀಯರಿಗೆ ಪ್ರಾಶಸ್ತ್ಯ ನೀಡಬೇಕೆಂದಿದ್ದರೂ ಅದನ್ನು ಯಾಕೆ ಜಾರಿಗೆ ತರುತ್ತಿಲ್ಲ’ ಎಂದು ಮಾಜಿ ಶಾಸಕ ಮೊಯಿದೀನ್ ಬಾವಾ ಪ್ರಶ್ನಿಸಿದ್ದಾರೆ. ಜಿಲ್ಲೆಯಲ್ಲಿ ಏಳು ಮಂದಿ ಆಡಳಿತ ಪಕ್ಷ ಬಿಜೆಪಿಯ ಶಾಸಕರು, ಒಬ್ಬ ಸಂಸದರು ಇದ್ದರೂ ಈ ನೇಮಕಾತಿ ವಿರುದ್ಧ ಧ್ವನಿ ಎತ್ತದೆ ಇರುವುದು ಆಶ್ಚರ್ಯ ಮೂಡಿಸುತ್ತದೆ. ಈ ನೇಮಕಾತಿಯ ವಿರುದ್ಧ ವಕೀಲರ ಮೂಲಕ ತಡೆ ತರಲು ಯತ್ನಿಸುವುದಾಗಿ ಬಾವಾ ಹೇಳಿದ್ದಾರೆ. ಕಂಪೆನಿಯ ಈ ನೀತಿಯ ವಿರುದ್ಧ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸುವುದಾಗಿ ಬಾವಾ ಎಚ್ಚರಿಕೆ ನೀಡಿದ್ದಾರೆ.
ಎಂಆರ್ ಪಿಎಲ್ ನಿರ್ಮಾಣವಾಗುವ ಸಂದರ್ಭದಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡುವ ಭರವಸೆ ನೀಡಿದ್ದರು. ಆದರೆ ನಂತರದ ದಿನಗಳಲ್ಲಿ ಉದ್ಯೋಗ ನೀಡದೇ ತಾರತಮ್ಯ ಎಸಗಲಾಗಿದೆ. ಸ್ಥಳೀಯರನ್ನು ನೇಮಕಾತಿ ಮಾಡದೇ ಉತ್ತರ ಭಾರತ ಮೂಲದ ಕಾರ್ಮಿಕರನ್ನು ಭರ್ತಿ ಮಾಡಿರುವುದು ಯಾವ ನ್ಯಾಯ? 184 ಮಂದಿಯಲ್ಲಿ ಕೇವಲ 13 ಮಂದಿ ಕರ್ನಾಟಕದ ಉದ್ಯೋಗಿಗಳನ್ನು ನೇಮಕ ಮಾಡಿದ್ದು ಅದರಲ್ಲಿ ಉಡುಪಿ, ಕಾರ್ಕಳ, ಮಂಗಳೂರಿನ ಒಬ್ಬೊಬ್ಬ ಉದ್ಯೋಗಿಯನ್ನು ಸೇರಿಸಲಾಗಿದೆ. ಸ್ಥಳೀಯರ ಜಮೀನು ಪಡೆದು ತಲೆಯೆತ್ತಿರುವ ಎಂಆರ್ ಪಿಎಲ್ ಸ್ಥಳೀಯರಿಗೆ ತಾರತಮ್ಯ ಎಸಗುತ್ತಿದೆ. ಸ್ಥಳೀಯ ಭತ್ತದ ಗದ್ದೆಗಳಿಗೆ ಕೆಮಿಕಲ್ ತ್ಯಾಜ್ಯ ಬಿಡುತ್ತಿದ್ದು ಅದನ್ನು ಪ್ರಶ್ನಿಸುವ ಗೋಜಿಗೂ ಜಿಲ್ಲೆಯ ಜನಪ್ರತಿನಿಧಿಗಳು ಮುಂದಾಗುತ್ತಿಲ್ಲ. ಈ ಬಗ್ಗೆ ಇನ್ನಾದರೂ ಸಂಬಂಧಪಟ್ಟ ಜಿಲ್ಲಾಡಳಿತ ಎಚ್ಚೆತ್ತು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಉಗ್ರ ಪ್ರತಿಭಟನೆ ನಡೆಸುವುದಾಗಿ ಬಾವಾ ಎಚ್ಚರಿಕೆ ನೀಡಿದರು.
ಕುಳಾಯಿ ನ್ಯಾಯಬೆಲೆ ಅಂಗಡಿಯಲ್ಲಿ ಜನರು ನಸುಕಿನ ಜಾವ 7 ಗಂಟೆಗೆ ಕ್ಯೂ ನಿಲ್ಲುತ್ತಾರೆ. 7 ಗಂಟೆಯಿಂದ ರೇಷನ್ ವಿತರಣೆ ನಡೆಯಬೇಕಿದ್ದು ಇಂದು 1 ಗಂಟೆಯ ಕಾಲ ಸರ್ವರ್ ದೋಷದಿಂದ ವಿಳಂಬವಾಗಿದೆ. ಅಲ್ಲಿಗೆ ಕೂಳೂರು, ಪಣಂಬೂರು ಕಡೆಯಿಂದ ರೇಷನ್ ತರಲು ಹೋಗುತ್ತಾರೆ. ಗುಂಪುಗುಂಪಾಗಿ 600ಕ್ಕೂ ಹೆಚ್ಚು ಮಂದಿ ಸೇರುತ್ತಿದ್ದು ಸಾಮಾಜಿಕ ಅಂತರವೂ ಇಲ್ಲವಾಗಿದೆ. ರೇಷನ್ ಅಂಗಡಿಯಿಂದ ತೆರಳುವಾಗ ರಿಕ್ಷಾ ವ್ಯವಸ್ಥೆ ಇಲ್ಲದೆ ಸಮಸ್ಯೆ ಎದುರಿಸುತ್ತಿದ್ದಾರೆ. ಜಿಲ್ಲಾಡಳಿತ ಆದಷ್ಟು ಬೇಗ ಇದನ್ನು ಸರಿಪಡಿಸಿ ರೇಷನ್ ವಿತರಣೆ ಸರಿಯಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಬಾವಾ ಆಗ್ರಹಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು