ಪುತ್ತೂರು: ಎಪಿಎಂಸಿ ರಸ್ತೆಯಲ್ಲಿ ಬರುವ ರೈಲ್ವೇ ಕ್ರಾಸಿಂಗ್ ಸಮಸ್ಯೆಗೆ ಪರಿಹಾರವಾಗಿ ಮೇಲ್ಸೇತುವೆ ಯಾ ಅಂಡರ್ ಪಾಸ್ ನಿರ್ಮಾಣ ಕಾರ್ಯಕ್ಕೆ ಸಂಬಂಧಿಸಿ ಮೈಸೂರು ರೈಲ್ವೇಯ ರೈಲ್ವೇ ಕನ್ಸ್ಟ್ರಕ್ಷನ್ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ನವಾಹತ್ ಸಿಂಗ್ ಅವರು ಜೂ.4ರಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಾರ್ಯಸಾಧನ ವರದಿ ಸಲ್ಲಿಕೆ
ಎಪಿಎಂಸಿ ರೈಲ್ವೇ ಕ್ರಾಸಿಂಗ್ ತಪ್ಪಿಸಿ, ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂಬ ಬೇಡಿಕೆ ಇದೆ. ಸಮಸ್ಯೆಯ ಕುರಿತು ವರದಿಗೆ ಸಂಬಂಧಿಸಿ ಮೇಲ್ಸೇತುವೆ ಅಥವಾ ಅಂಡರ್ ಪಾಸ್ ನಿರ್ಮಾಣಕ್ಕೆ ಅಂದಾಜು ವೆಚ್ಚ ಪಟ್ಟಿ ತಯಾರು ಮಾಡಬೇಕು. ಅದಕ್ಕೂ ಮುಂದೆ ಸರ್ವೇ ಕಾರ್ಯ ನಡೆಸಬೇಕಾಗಿದೆ. ಅದಕ್ಕೂ ಮೊದಲು ಕಾರ್ಯಸಾಧನ ವರದಿಗಾಗಿ ನಾನು ಪರಿಶೀಲನೆ ನಡೆಸಲು ಆಗಮಿಸಿದ್ದೇನೆ. ಕಾರ್ಯಸಾಧನ ವರದಿಗೆ ಸಂಬಂಧಿಸಿ ಮುಂದೆ ಸರ್ವೆ ಕಾರ್ಯ ನಡೆಸಲಾಗುತ್ತದೆ ಎಂದು ಮಾದ್ಯಮದ ಜೊತೆ ಮಾತನಾಡಿದರು.
ಬಳಿಕ ಅವರು ರೈಲ್ವೇ ಗೇಟ್ನಿಂದ ರಸ್ತೆಯ ಅಂಚಿನಲ್ಲಿರುವ ತೋಡು ಮತ್ತು ಸಂಕವನ್ನು ಪರಿಶೀಲಿಸಿ, ಬಳಿಕ ರೈಲ್ವೇ ಜಾಗದಲ್ಲಿರುವ ಸಾರ್ವಜನಿಕ ಶ್ರೀ ಮಹಾಲಿಂಗೇಶ್ವರ ಕಟ್ಟೆಯ ಸಮೀಪದ ತನಕ ಸುತ್ತಾಡಿ ಪರಿಶೀಲಿಸಿದರು. ಕಾಮಗಾರಿ ಆರಂಭಿಸಿದರೆ ಬದಲಿ ರಸ್ತೆ ವ್ಯವಸ್ಥೆ ಕುರಿತು ನಗರಸಭೆ ಕಾರ್ಯಪಾಲಕ ಇಂಜಿನಿಯರ್ ಪ್ರಭಾರ ಪೌರಾಯುಕ್ತ ಅರುಣ್, ಎಪಿಎಂಸಿ ಕಾರ್ಯದರ್ಶಿ ರಾಮಚಂದ್ರ ಮತ್ತು ಸ್ಥಳಿಯವಾಗಿದ್ದ ರೈಲು ಬಳಕೆದಾರರ ಹಿತರಕ್ಷಣಾ ವೇದಿಕೆ ಸಂಚಾಲಕ ಸುದರ್ಶನ್ ಮುರ, ಮಾಜಿ ಪುರಸಭೆ ಸದಸ್ಯ ಉದಯ ಹೆಚ್, ರವೀಂದ್ರನ್, ಅನಿಲ್ ಕಾಮತ್, ಬಳಕೆದಾರರ ವೇದಿಕೆಯ ದಿನೇಶ್ ಭಟ್, ಕೊಂಕಣಿ ಸಾಹಿತ್ಯ ಅಕಾಡೆಮಿ ಸದಸ್ಯ ದಾಮೋದರ್ ಭಂಡಾರ್ಕರ್, ಸಂದಿಪ್ ಲೋಬೊ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ದೇಶಾದ್ಯಂತ ಚುನಾವಣೆಗ ಅಂತ್ಯಗೊಳುವುದಕ್ಕೂ ಮುನ್ನ ವಿವಿಧ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪ್ರಕ್ರಿಯೆ ಆರಂಭಿಸಬೇಕೆಂದು ಕೇಂದ್ರ ನಿರ್ಧರಿಸಿದೆ.
ವ್ಯಕ್ತಿಯೊಬ್ಬ ತನ್ನ ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ ಸೀತಾಪುರದಲ್ಲಿ ನಡೆದಿದೆ.
ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ನಗರ ಹೊರವಲಯದ ಯಲ್ಲಾಲಿಂಗ್ ಕಾಲೋನಿಯಲ್ಲಿ ನಡೆದಿದೆ.
ಮುಂದಿನ 6 ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ ನೀಡಿದೆ.
ಅಕ್ರಮ ಮದ್ಯ ನೀತಿ ಪ್ರಕರಣದ ಆರೋಪದಲ್ಲಿ ಜೈಲು ಸೇರಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ನಿನ್ನೆ ಸುಪ್ರೀಂ ಕೋರ್ಟ್…
ಲೈಂಗಿಕ ದೌರ್ಜನ್ಯ ಆರೋಪ ಹಿನ್ನೆಲೆ ವಕೀಲ ದೇವರಾಜೇಗೌಡರನ್ನು ಹಿರಿಯೂರು ಪೊಲೀಸರು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗುಯಿಲಾಳ್ ಟೋಲ್ ಬಳಿ …