ಬೆಳ್ತಂಗಡಿ : ಧರ್ಮಸ್ಥಳದ ಎಸ್.ಡಿ.ಎಂ. ಮೆಡಿಕಲ್ ಟ್ರಸ್ಟ್ ಆಶ್ರಯದಲ್ಲಿ ಉಜಿರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಸ್.ಡಿ.ಎಂ. ಆಸ್ಪತ್ರೆಯಲ್ಲಿ 13 ಮಂದಿ ತಜ್ಞ ವೈದ್ಯರು ಹಾಗೂ 12 ಮಂದಿ ವೈದ್ಯರು ವಿವಿಧ ವಿಭಾಗಗಳಲ್ಲಿ ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟದ ಸೇವೆ ನೀಡುತ್ತಾರೆ. ಅಗತ್ಯವಿದ್ದಲ್ಲಿ ಮಂಗಳೂರಿನಿಂದ ತಜ್ಞ ವೈದ್ಯರ ಸೇವೆಯನ್ನೂ ಬಳಸಿಕೊಳ್ಳಲಾಗುತ್ತದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಂಜನ್ ಕುಮಾರ್ ಹೇಳಿದರು.
ಆರು ತಿಂಗಳುಗಳ ಒಳಗೆ ಒಂದೂವರೆ ಕೋಟಿ ರೂ. ಮೌಲ್ಯದ ಸಿ.ಟಿ. ಸ್ಕ್ಯಾನ್ ಸೌಲಭ್ಯ ಪ್ರಾರಂಭಗೊಳ್ಳಲಿದೆ ಎಂದು ಅವರು ತಿಳಿಸಿದರು.
ಆಸ್ಪತ್ರೆಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ವಿವಿಧ ಸೇವಾ ಸೌಲಭ್ಯಗಳ ಬಗ್ಯೆ ಸವಿವರ ಮಾಹಿತಿ ನೀಡಿದರು.
ಆಸ್ಪತ್ರೆಯ ನಿರ್ದೇಶಕ ಎಂ. ಜನಾರ್ದನ್ ಮಾತನಾಡಿ, ಆಸ್ಪತ್ರೆಯಲ್ಲಿ 181 ಹಾಸಿಗೆ ಸೌಲಭ್ಯ, 9 ತುರ್ತು ನಿಗಾ ಘಟಕ, ಹೊರರೋಗಿ ಚಿಕಿತ್ಸಾ ವಿಭಾಗ, ನೇತ್ರಾ ಚಿಕಿತ್ಸಾ ವಿಭಾಗ, ಮೂರು ಅಂಬ್ಯುಲೆನ್ಸ್ಗಳು, ಔಷಧಿ ವಿಭಾಗ, ಹೆರಿಗೆ ವಿಭಾಗ ದಿನದ 24 ಗಂಟೆಯೂ ಸೇವೆಗೆ ಲಭ್ಯ ಇರುತ್ತವೆ.
ತುರ್ತು ಸಂದರ್ಭಗಳಲ್ಲಿ ಶವ ಸಾಗಿಸಲು “ಮುಕ್ತಿ” ವಾಹನದ ಉಚಿತ ಸೇವೆ ಇದೆ. ಆಸ್ಪತ್ರೆಯು 26 ವಿಮಾ ಕಂಪೆನಿಗಳೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ರಿಯಾಯಿತಿ ದರದಲ್ಲಿ ಉತ್ತಮ ಸೇವೆ ನೀಡಲಾಗುತ್ತದೆ. ಆಸ್ಪತ್ರೆಯಲ್ಲಿ ಸ್ವಚ್ಛತೆ, ಉತ್ತಮ ಗಾಳಿ-ಬೆಳಕು, ಪ್ರಶಾಂತ ಪರಿಸರ ಮತ್ತು ಸೌಜನ್ಯ ಪೂರ್ಣ ಸೇವೆಗೆ ಆದ್ಯತೆ ನೀಡಲಾಗುತ್ತದೆ ಎಂದು ಅವರು ತಿಳಿಸಿದರು.
ಡಾ. ಸಾತ್ವಿಕ್ ಜೈನ್, ಪತ್ರಕರ್ತರ ಸಂಘದ ಅಧ್ಯಕ್ಷ ಅಚ್ಚುಶ್ರೀ ಬಾಂಗೇರು, ಕಾರ್ಯದರ್ಶಿ ಜಾರಪ್ಪ ಪೂಜಾರಿ ಉಪಸ್ಥಿತರಿದ್ದರು.
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ