ಮಂಗಳೂರು: ಗ್ರಾಪಂ ಕಾರ್ಯದರ್ಶಿ ನೇಣು ಬಿಗಿದುಕೊಂಡ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಂದಾವರ ಎಕ್ಕಾರು ಗ್ರಾಮದಲ್ಲಿ ಗುರುವಾರ ನಡೆದಿದೆ.
ಬಾಗಲಕೋಟೆ ಮೂಲದ ಮುದುಕಪ್ಪ ವಿಠಲ ಮುರುನಾಲ್ (46) ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ. ಇವರು ಕಂದಾವರ ಗ್ರಾಪಂನ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸುತ್ತಿದ್ದು, ಹಲವು ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು.
ಜೀವನದಲ್ಲಿ ಜಿಗುಪ್ಸೆಗೊಂಡು ಸ್ವಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಲಾಗಿದೆ. ಈ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.