News Karnataka Kannada
Saturday, May 04 2024
ಕರಾವಳಿ

ಕರಾವಳಿಯ ಹಿರಿಯ ಕಾಂಗ್ರೆಸ್ ನಾಯಕ ಮೊಹಿದಿನ್ ವಿಧಿವಶ

Photo Credit :

ಕರಾವಳಿಯ ಹಿರಿಯ ಕಾಂಗ್ರೆಸ್ ನಾಯಕ ಮೊಹಿದಿನ್ ವಿಧಿವಶ

ಮಂಗಳೂರು: ಕರಾವಳಿಯ ಹಿರಿಯ ಕಾಂಗ್ರೆಸ್ ನಾಯಕ ಬಿ.ಎ. ಮೊಹಿದಿನ್ ಅವರು ಮಂಗಳವಾರ ಬೆಳಗ್ಗೆ ಸಾವನ್ನಪ್ಪಿದ್ದಾರೆ. ಅನಾರೋಗ್ಯದಿಂಧ ಬಳಲುತ್ತಿದ್ದ ೮೧ ವರ್ಷದ ಮೊಹಿದಿನ್ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಆ ಬಳಿಕ ಚೇತರಿಸಿಕೊಂಡು ಬೆಂಗಳೂರಿಗೆ ಬಂದಿದ್ದ ಅವರು ಕಳೆದ ವಾರ ಮತ್ತೇ ಅನಾರೋಗ್ಯಕ್ಕೀಡಾದರು. ಬೆಂಗಳೂರಿನ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಪಡೆಯುತ್ತಿದ್ದ ಅವರು ಇಂದು ಮುಂಜಾನೆ ೬ಕ್ಕೆ ನಿಧರಾಗಿದ್ದಾರೆ.

ಸರಳ ಸಜ್ಜನಿಕೆಗೆ ಹೆಸರುವಾಸಿಯಾಗಿದ್ದ ಮೊಹಿದಿನ್ ಅವರು ಪೇಜಾವರ ಎಂಬ ಕುಗ್ರಾಮದ ಅನಕ್ಷರಸ್ಥ ಮುಸ್ಲಿಂ ಕುಟುಂಬದಲ್ಲಿ ಹುಟ್ಟಿದರು. ತಮ್ಮ ಪ್ರಯತ್ನದಿಂದಲೇ ಕಾಂಗ್ರೆಸ್ ರಾಜಕೀಯದಲ್ಲಿ ಗುರುತಿಸಿ ರಾಜ್ಯದ ಉನ್ನತ ಶಿಕ್ಷಣ ಸಚಿವರ ಹುದ್ದೆಯನ್ನೂ ಒಂದು ಸಣ್ಣ ಕಪ್ಪು ಚುಕ್ಕೆಯೂ ಇಲ್ಲದಂತೆ ನಿರ್ವಹಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ಇನ್ನೂ ಮೊಹಿದಿನ್ ಅವರ ಆತ್ಮಕಥನ ‘ನನ್ನೊಳಗಿನ ನಾನು’ ಇನ್ನೇನು ಕೆಲವೇ ದಿನಗಳಲ್ಲಿ ಬಿಡುಗಡೆಯಾಗುವುದಿತ್ತು.

ಮೊಹಿದಿನ್ ಅವರ ಪಾರ್ಥಿವ ಶರೀರವನ್ನು 8 ಗಂಟೆಗೆ ಬೆಂಗಳೂರಿನ ಸಂಜಯ ನಗರದಲ್ಲಿರುವ ನಿವಾಸಕ್ಕೆ ಕೊಂಡೊಯ್ಯಲಾಗಿದೆ.11 ಗಂಟೆಗೆ ಸಾರ್ವಜನಿಕರ ದರ್ಶನಕ್ಕೆ ಇಟ್ಟು ನಂತರ ಮಂಗಳೂರಿಗೆ ಕೊಂಡೊಯ್ಯಲಾಗುವುದು ಎಂದು ಮೂಲಗಳು ತಿಳಿಸಿವೆ.

ಸಿಎಂ ಕುಮಾರಸ್ವಾಮಿ ಸಂತಾಪ: ಮಾಜಿ ಸಚಿವ ಹಾಗೂ ಹಿರಿಯ ರಾಜಕಾರಣಿ ಬಿ.ಎ. ಮೊಹಿದೀನ್ ಅವರ ನಿಧನ ಕ್ಕೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂಅವರ ನಿಧನದ ದುಃಖವನ್ನು ಭರಿಸುವ ಶಕ್ತಿಯನ್ನು ಕುಟುಂಬದವರಿಗೆ ನೀಡಲಿ ಎಂದು ಪ್ರಾರ್ಥಿಸಿದ್ದಾರೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
191

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು