Categories: ಕರಾವಳಿ

ಕಾಸರಗೋಡಿನಲ್ಲಿ ತೆಂಗಿಗೆ ಹುಳಬಾದೆ

ಕಾಸರಗೋಡು: ತೆಂಗಿಗೆ ಹುಳಬಾಧೆ ಮತ್ತೆ ಕಂಡು ಬಂದಿದೆ. ಕೇರಳ  ಸೇರಿದಂತೆ ಕರಾವಳಿಯ ಹಲವೆಡೆಗಳಲ್ಲಿ ತೆಂಗುಗಳು ಹಳದಿ ಬಣ್ಣಕ್ಕೆ ತಿರುಗಿದೆ. ಕೆಲ ವರ್ಷಗಳ ಹಿಂದೆ  ಕಂಡು ಬಂದು ಬಳಿಕ ದೂರವಾಗಿದ್ದ ಹುಳು ಬಾಧೆ ಇದೀಗ ಬಿಸಿಲ ತಾಪ ಹೆಚ್ಚುತ್ತಿದ್ದಂತೆ ವಕ್ಕರಿಸತೊಡಗಿದೆ.

ಆರಂಭದಲ್ಲಿ ಈ ಕೀಟ ಬಾಧೆಗೆ  ಕಡಿವಾಣ ಹಾಕದಿದ್ದಲ್ಲಿ ತೆಂಗಿಗೆ ಮಾರಕವಾಗಿ ಈ ಹುಳುಬಾಧೆ ಪರಿಣಮಿಸಲಿದೆ ಎಂದು ತಜ್ಞರು ಅಭಿಪ್ರಾಯಪಡುತ್ತಿದ್ದಾರೆ. ತೆಂಗಿನ ಮಡಲು ಸಂಪೂರ್ಣವಾಗಿ ಹಳದಿ ಬಣ್ಣಕ್ಕೆ ತಿರುಗಿ  ಫಸಲು  ಸಂಪೂರ್ಣ ಕುಸಿಯುತ್ತಿದೆ.
ಜಿಲ್ಲೆಯ ನೀಲೇಶ್ವರ, ಕಾಪಾಡ್, ಪರಪ್ಪನಂಗಡಿ ಇತರ ಪ್ರದೇಶಗಳಲ್ಲಿ ಈ ಕೀಟಬಾಧೆ ಉಂಟಾಗಿದೆ. ಉಳ್ಳಾಲದಲ್ಲೂ ಕೀಟಬಾಧೆ ಪತ್ತೆಯಾಗಿದೆ ಎನ್ನಲಾಗಿದೆ. ವೇಗವಾಗಿ ಒಂದು ಮರದಿಂದ ಇನ್ನೊಂದು ಮರಕ್ಕೆ ಈ ಕೀಟಬಾಧೆ ಹರಡುತ್ತಿದೆ. ಮಡಲಿನ ಅಡಿಭಾಗದಲ್ಲಿ ಹುಳುಗಳು ಉತ್ಪತ್ತಿಯಾಗುತ್ತಿದ್ದು, ಇದು ಒಂದು ಮರದಿಂದ ಇನ್ನೊಂದು ಮರಕ್ಕೆ ವೇಗವಾಗಿ ಹರಡುತ್ತಿದೆ.
ಕೀಟಬಾಧೆ ಹರಡುತ್ತಿದ್ದರೂ ಕೃಷಿ ಇಲಾಖೆ ನಿಯಂತ್ರಣಕ್ಕೆ ಇನ್ನೂ ಕ್ರಮ ತೆಗೆದುಕೊಂಡಿಲ್ಲ. ಕೇಂದ್ರ ತೋಟಗಾರಿಕಾ ಸಂಶೋಧನಾ ಕೇಂದ್ರವು ಈ ನಿಟ್ಟಿನಲ್ಲಿ ಗಂಭೀರವಾಗಿ ಚಿಂತನೆ ನಡೆಸಿದ್ದು , ರೋಗ ನಿಯಂತ್ರಣ ಕುರಿತು ಈಗಾಗಲೇ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದೆ. ಆದರೂ  ಕೀಟ ಬಾಧೆ ದೊಡ್ಡ ಸವಾಲಾಗಿ ಪರಿಣಮಿಸಿದೆ.

Desk

Recent Posts

ಬಾಲಕನನ್ನು ಕಚ್ಚಿದ ನಾಯಿಯನ್ನು ಕೊಂದು ತಿಂದ ಭೂಪ

ತನ್ನ ಸೋದರಳಿಯನಿಗೆ ಕಚ್ಚಿದ ಸಾಕುನಾಯಿಯನ್ನು ವ್ಯಕ್ತಿಯೊಬ್ಬ ಕೊಂದು ತಿಂದ ಘಟನೆ ಥೈಲ್ಯಾಂಡಿನಲ್ಲಿ ನಡೆದಿದ್ದು, ಇದರ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.

2 mins ago

ಯೋಗಿ ಆದಿತ್ಯನಾಥ್ ಅವರ ಡೀಪ್‌ಫೇಕ್ ವೀಡಿಯೋ ಶೇರ್ ಮಾಡಿದ ಆರೋಪಿಯ ಬಂಧನ

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್  ಅವರ ಡೀಪ್‌ಫೇಕ್ ವೀಡಿಯೋವನ್ನು ಪೋಸ್ಟ್ ಮಾಡಿ ಶೇರ್ ಮಾಡಿದ ಆರೋಪದ ಮೇಲೆ ಉತ್ತರಪ್ರದೇಶ ಎಸ್‌ಟಿಎಫ್  ತಂಡ…

17 mins ago

ಉರುಳಿಗೆ ಸಿಲುಕಿದ ಚಿರತೆಯನ್ನು ರಕ್ಷಿಸಿ ಕಾಡಿಗೆ ಬಿಟ್ಟ ಅರಣ್ಯ ಇಲಾಖೆ

ಉರುಳಿಗೆ ಸಿಲುಕಿ ನರಳುತ್ತಿದ್ದ ಚಿರತೆಯನ್ನು ರಕ್ಷಿಸಿ ಸುರಕ್ಷಿತವಾಗಿ ನಾಗರಹೊಳೆ ಅಭಯಾರಣ್ಯಕ್ಕೆ ಬಿಟ್ಟ ಘಟನೆ ಪಿರಿಯಾಪಟ್ಟಣ ತಾಲೂಕಿನ ಮಲ್ಲಿನಾಥಪುರ ಗ್ರಾಮದ ಅರಣ್ಯ ನಡು ತೋಪಿನಲ್ಲಿ ನಡೆದಿದೆ.

36 mins ago

ಮೋದಿ ಮತ್ತೆ ಪ್ರಧಾನಿಯಾದರೆ ಭಾರತ ವಿಶ್ವಗುರು: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ

'ನರೇಂದ್ರ ಮೋದಿ ಮತ್ತೆ ಪ್ರಧಾನಿಯಾದರೆ ಭಾರತ ವಿಶ್ವಗುರು ಆಗಲಿದೆ' ಎಂದು ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಹೇಳಿದರು.

58 mins ago

ಪಾಕಿಸ್ತಾನಕ್ಕೆ ರಾಹುಲ್‌ ಗಾಂಧಿಯನ್ನು ಪ್ರಧಾನಿ ಸ್ಥಾನದಲ್ಲಿ ನೋಡುವ ಆಸೆ: ಮೋದಿ

ನೆರೆಯ ದೇಶ ಪಾಕಿಸ್ತಾನವು ಕಾಂಗ್ರೆಸ್‌ನ ಯುವರಾಜ ರಾಹುಲ್‌ ಗಾಂಧಿಯನ್ನು ಪ್ರಧಾನಿ ಗಾದಿಯ ಮೇಲೆ ನೋಡಲು ಬಯಸುತ್ತಿದೆ ಎಂದು ಮೋದಿ ಟೀಕಿಸಿದ್ದಾರೆ.

1 hour ago

ಪ್ರಧಾನಿ ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಪ್ರಧಾನಿ ಮೋದಿ ಸ್ಟೇಟ್ಸ್‌ ಮ್ಯಾನ್‌ (ರಾಜನೀತಿಜ್ಞ) ಅಲ್ಲ, ಅವರೊಬ್ಬ ಸೇಲ್ಸ್‌ಮ್ಯಾನ್‌ ಎಂದು ವಿಧಾನ ಪರಿಷತ್‌ ಸದಸ್ಯ ಬಿ.ಕೆ ಹರಿಪ್ರಸಾದ ಟೀಕಿಸಿದರು.

1 hour ago