News Karnataka Kannada
Thursday, May 02 2024
ಕರಾವಳಿ

ಕುಂದಾಪುರದಲ್ಲಿ ಮತ್ತೊಂದು ಗಂಡು ಚಿರತೆ ಬೋನಿಗೆ

Photo Credit :

ಕುಂದಾಪುರದಲ್ಲಿ ಮತ್ತೊಂದು ಗಂಡು ಚಿರತೆ ಬೋನಿಗೆ

ಉಡುಪಿ: ಆಹಾರ ಅರಸಿ ಜನವಸತಿಯತ್ತ ಬಂದು ಆತಂಕ ಮೂಡಿಸಿದ್ದ ಮತ್ತೊಂದು ಚಿರತೆ ಇಂದು ಮುಂಜಾನೆ ಅರಣ್ಯ ಇಲಾಖೆಯಿಟ್ಟ ಬೋನಿಗೆ ಬಿದ್ದಿದೆ.

ಕಳೆದ ಶುಕ್ರವಾರ ತಡರಾತ್ರಿ ಹೆಣ್ಣು ಚಿರತೆಯೊಂದು ಬೋನಿಗೆ ಬಿದ್ದಿತ್ತು. ಕುಂದಾಪುರ ತಾಲೂಕು ಕಾಳಾವರ ಕಕ್ಕೇರಿ ಸಮೀಪದ ವಾರಾಹಿ ಕಾಲುವೆ ಬಳಿಯ ಹಾಡಿ ಪ್ರದೇಶದಲ್ಲಿ ಹಲವಾರು ಸಮಯಗಳಿಂದ ಚಿರತೆಗಳು ಓಡಾಟವನ್ನು ಜನರು ಪ್ರತ್ಯಕ್ಷವಾಗಿ ಕಂಡಿದ್ದರು. ಮನೆಯ ನಾಯಿಗಳನ್ನು ಹಿಡಿಯಲು ಚಿರತೆಗಳು ಸುಳಿದಾಡುತ್ತಿತ್ತು.

ಜನರು ನೀಡಿದ ಮಾಹಿತಿಯಂತೆ ಸೂಕ್ತ ಸ್ಥಳದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಬೋನು ಇರಿಸಿದ್ದರು.

ಕಳೆದ ಶುಕ್ರವಾರ ತಡರಾತ್ರಿ 4-5 ವರ್ಷ ಪ್ರಾಯದ ಹೆಣ್ಣು ಚಿರತೆ ಬೋನಿಗೆ ಬಿದ್ದಿದೆ. ಇಂದು ಬೆಳಿಗ್ಗೆ ಬೋನಿನಲ್ಲಿ ಚಿರತೆ ಕಂಡ ಸ್ಥಳೀಯರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ದೌಡಾಯಿಸಿದ ಅಧಿಕಾರಿಗಳು ಸೆರೆಯಾದ ಹತ್ತು ವರ್ಷ ಪ್ರಾಯದ ಗಂಡು ಚಿರತೆಯನ್ನು ವನ್ಯಜೀವಿ ವಲಯಕ್ಕೆ ರವಾನಿಸಿದ್ದಾರೆ. ಡಿ.ಎಫ್.ಒ ಪ್ರಭಾಕರನ್ ಮಾರ್ಗದರ್ಶನದಲ್ಲಿ ಎ.ಸಿ.ಎಫ್ ಲೋಹಿತ್, ಆರ್.ಎಫ್.ಒ ಪ್ರಭಾಕರ್ ಕುಲಾಲ್, ಉಪವಲಯ ಅರಣ್ಯಾಧಿಕಾರಿ ಉದಯ್, ಅರಣ್ಯ ರಕ್ಷಕರಾದ ಶಂಕರ್ ಖಾರ್ವಿ, ವಿ. ಮಂಜು, ಸೋಮಶೇಖರ್, ಬಸವರಾಜ್, ಇಲಾಖೆ ವಾಹನ ಚಾಲಕ ಅಶೋಕ್ ಈ ಕಾರ್ಯಾಚರಣೆಯಲ್ಲಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
192
Shreyas Vittal

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು