ಮಂಗಳೂರು: ಮಲೆನಾಡು ಹಾಗೂ ಸುಬ್ರಹ್ಮಣ್ಯ ಪರಿಸರದಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಕುಮಾರಧಾರ ನದಿಯಲ್ಲಿ ಭಾರೀ ಪ್ರವಾಹ ಹರಿದು ಬಂದು ಶುಕ್ರವಾರ ಕುಮಾರಧಾರ ಸ್ನಾನಘಟ್ಟ ಸಂಪೂರ್ಣ ಜಲಾವೃತಗೊಂಡಿದೆ.
ಕುಮಾರಧಾರದ ಉಪನದಿಯಾದ ದರ್ಪಣತೀರ್ಥವು ತುಂಬಿ ಹರಿದು ದರ್ಪಣತೀರ್ಥ ಸೇತುವೆಯು ಮುಳುಗಡೆಗೊಂಡಿತ್ತು. ಇದರಿಂದ ಸುಬ್ರಹ್ಮಣ್ಯ-ಪುತ್ತೂರು ಸಂಚಾರಕ್ಕೆ ಅಡಚಣೆ ಉಂಟಾಗಿತ್ತು
ಕುಮಾರಪರ್ವತ ಸೇರಿದಂತೆ ಘಟ್ಟ ಪ್ರದೇಶದಲ್ಲಿ ಸುರಿದ ಬಾರೀ ಮಳೆಯ ಪರಿಣಾಮ ಕುಮಾರಧಾರ ನದಿಯು ಉಕ್ಕಿ ಹರಿಯಿತು. ಸ್ನಾನಘಟ್ಟ ಮುಳುಗಡೆಯಾದುದರಿಂದ ಭಕ್ತರು ತೀರ ಪ್ರದೇಶದಲ್ಲಿ ಪಾತ್ರೆಗಳಿಂದ ಮೂಲಕ ನೀರನ್ನು ಹಾಕಿ ತೀರ್ಥಸ್ನಾನ ಪೂರೈಸಿದರು.
ಕುಮಾರಧಾರ ನದಿಯ ಉಪನದಿಯಾದ ದರ್ಪಣತೀರ್ಥ ನದಿಯು ತುಂಬಿ ಹರಿದು ಸೇತುವೆ ಮುಳುಗಡೆಗೊಂಡಿತ್ತು.
ಅಲ್ಲದೆ ಪುತ್ತೂರು-ಸುಬ್ರಹ್ಮಣ್ಯ ರಸ್ತೆಯು ಜಲಾವೃತ್ತವಾಗಿತ್ತು.ಇದರಿಂದಾಗಿ ಸಂಚಾರ ಸ್ಥಗಿತಗೊಂಡಿತ್ತು. ಸುಬ್ರಹ್ಮಣ್ಯ ಪೋಲೀಸರು ಬ್ಯಾರಿಕೇಡ್ಗಳನ್ನು ಹಾಕಿ ಮುಂಜಾಗೃತಾ ಕ್ರಮ ಕೈಗೊಂಡಿದ್ದರು. ಅಲ್ಲದೆ ದರ್ಪಣ ತೀರ್ಥದ ನೀರು ಸಮೀಪದ ಕೃಷಿ ತೋಟಗಳಿಗೆ ನೀರು ನುಗ್ಗಿತು.