News Karnataka Kannada
Monday, April 29 2024
ಕರಾವಳಿ

ಕುಕ್ಕೆ: ಮಳೆಯ ಆರ್ಭಟಕ್ಕೆ ಕುಮಾರಧಾರ ಸ್ನಾನಘಟ್ಟ ಜಲಾವೃತ

Subramanya 07082021
Photo Credit :

ಮಂಗಳೂರು: ಮಲೆನಾಡು ಹಾಗೂ ಸುಬ್ರಹ್ಮಣ್ಯ ಪರಿಸರದಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಕುಮಾರಧಾರ ನದಿಯಲ್ಲಿ ಭಾರೀ ಪ್ರವಾಹ ಹರಿದು ಬಂದು ಶುಕ್ರವಾರ ಕುಮಾರಧಾರ ಸ್ನಾನಘಟ್ಟ ಸಂಪೂರ್ಣ ಜಲಾವೃತಗೊಂಡಿದೆ.

ಕುಮಾರಧಾರದ ಉಪನದಿಯಾದ ದರ್ಪಣತೀರ್ಥವು ತುಂಬಿ ಹರಿದು ದರ್ಪಣತೀರ್ಥ ಸೇತುವೆಯು ಮುಳುಗಡೆಗೊಂಡಿತ್ತು. ಇದರಿಂದ ಸುಬ್ರಹ್ಮಣ್ಯ-ಪುತ್ತೂರು ಸಂಚಾರಕ್ಕೆ ಅಡಚಣೆ ಉಂಟಾಗಿತ್ತು

ಕುಮಾರಪರ್ವತ ಸೇರಿದಂತೆ ಘಟ್ಟ ಪ್ರದೇಶದಲ್ಲಿ ಸುರಿದ ಬಾರೀ ಮಳೆಯ ಪರಿಣಾಮ ಕುಮಾರಧಾರ ನದಿಯು ಉಕ್ಕಿ ಹರಿಯಿತು. ಸ್ನಾನಘಟ್ಟ ಮುಳುಗಡೆಯಾದುದರಿಂದ ಭಕ್ತರು ತೀರ ಪ್ರದೇಶದಲ್ಲಿ ಪಾತ್ರೆಗಳಿಂದ ಮೂಲಕ ನೀರನ್ನು ಹಾಕಿ ತೀರ್ಥಸ್ನಾನ ಪೂರೈಸಿದರು.

ಕುಮಾರಧಾರ ನದಿಯ ಉಪನದಿಯಾದ ದರ್ಪಣತೀರ್ಥ ನದಿಯು ತುಂಬಿ ಹರಿದು ಸೇತುವೆ ಮುಳುಗಡೆಗೊಂಡಿತ್ತು.

ಅಲ್ಲದೆ ಪುತ್ತೂರು-ಸುಬ್ರಹ್ಮಣ್ಯ ರಸ್ತೆಯು ಜಲಾವೃತ್ತವಾಗಿತ್ತು.ಇದರಿಂದಾಗಿ ಸಂಚಾರ ಸ್ಥಗಿತಗೊಂಡಿತ್ತು. ಸುಬ್ರಹ್ಮಣ್ಯ ಪೋಲೀಸರು ಬ್ಯಾರಿಕೇಡ್‌ಗಳನ್ನು ಹಾಕಿ ಮುಂಜಾಗೃತಾ ಕ್ರಮ ಕೈಗೊಂಡಿದ್ದರು. ಅಲ್ಲದೆ ದರ್ಪಣ ತೀರ್ಥದ ನೀರು ಸಮೀಪದ ಕೃಷಿ ತೋಟಗಳಿಗೆ ನೀರು ನುಗ್ಗಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು