ಮಂಗಳೂರು: ಕೋಟ ಶ್ರೀನಿವಾಸ ಪೂಜಾರಿ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಇಂದು ನಗರದ ಕುದ್ರೋಳಿ ದೇವಸ್ಥಾನಕ್ಕೆ ಭೇಟಿ ನೀಡಿದರು. ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಅವರನ್ನು ಗೌರವಿಸಲಾಯಿತು. ಬಿಜೆಪಿ ನಾಯಕ ಹರಿಕೃಷ್ಣ ಬಂಟ್ವಾಳ, ಸೇರಿದಂತೆ ನಾಯಕರು ಇದ್ದರು.
ಕೋಟಾಗೆ ಕ್ಯಾಬಿನೆಟ್ ಪಟ್ಟ ದೊರಕಿದ ಹಿನ್ನೆಲೆ ಉಡುಪಿ ಜಿಲ್ಲೆಗೆ ವಿಶೇಷ ಪ್ರಾತಿನಿಧ್ಯ ದೊರೆತಿದೆ.
ಬ್ರಹ್ಮಾವರ ತಾಲ್ಲೂಕಿನ ಕೋಟ ಮೂಲದ ಕೋಟ ಶ್ರೀನಿವಾಸ ಪೂಜಾರಿ ಕರಾವಳಿಯ ಪ್ರಬಲ ಹಾಗೂ ರಾಜ್ಯದ ಹಿಂದುಳಿದ ಬಿಲ್ಲದ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ರಾಜಕೀಯದ ಹಂತ ಹಂತವಾಗಿ ಬೆಳೆದ ಕೋಟಾಗೆ ಇದೀಗ ಸಚಿವ ಸ್ಥಾನ ದೊರಕಿದೆ.