News Karnataka Kannada
Tuesday, April 30 2024
ಕರಾವಳಿ

ಕೃಷಿ ಭೂಮಿ ಪರಿವರ್ತನೆಗೆ 11ಇ ನಕಾಶೆಯಿಂದ ವಿನಾಯಿತಿ

Mla Poonja 23 7 21
Photo Credit :

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೃಷಿ ಭೂಮಿಯನ್ನು ಭೂ ಪರಿವರ್ತನೆ ಗೊಳಿಸಬೇಕಾದರೆ 11ಇ ನಕ್ಷೆ ಮತ್ತು ವಿವಿಧ ಸ್ಥಳೀಯ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪತ್ರವನ್ನು ಹಾಜರು ಪಡಿಸುವುದು ಕಡ್ಡಾಯವೆಂಬ ನಿಯಮವು ಚಾಲ್ತಿಯಲ್ಲಿತ್ತು. ಈ ನಿಯಮಗಳಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭೂ ಪರಿವರ್ತನೆ ಗೆ ಬಯಸಿದ್ದ ಆನೇಕ ಸಾರ್ವಜನಿಕರಿಗೆ ತೊಂದರೆ ತೊಂದರೆಯುಂಟಾಗುತ್ತಿತ್ತು. ಇದನ್ನು ಮಂಗಳೂರಿನ ಸಾಮಾಜಿಕ ಕಾರ್ಯಕರ್ತ ನವೀನ್ ಕುಂದರ್ ಎಂಬುವರು ಕರ್ನಾಟಕ ಉಚ್ಚ ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದರು.
ಅರ್ಜಿಯನ್ನು ವಿಚಾರಣೆ ಮಾಡಿದ ನ್ಯಾಯಾಲಯವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಕೃಷಿ ಭೂಮಿಯನ್ನು ಭೂ ಪರಿವರ್ತನೆ ಗೊಳಿಸಬೇಕಾದರೆ 11ಇ ನಕ್ಷೆ ಮತ್ತು ವಿವಿಧ ಸ್ಥಳೀಯ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪತ್ರವನ್ನು ಹಾಜರು ಪಡಿಸುವುದು ಕಡ್ಡಾಯವೆಂಬ ನಿಯಮದಿಂದ ವಿನಾಯಿತಿ ನೀಡಿ ಆದೇಶ ಮಾಡಿತ್ತು.
ಈ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಯವರಿಗೆ ನ್ಯಾಯಾಲಯದ ಆದೇಶವನ್ನು ತುರ್ತಾಗಿ ಅನುಷ್ಠಾನ ಗೊಳಿಸಲು ಕ್ರಮ ಕೈಗೊಳ್ಳಲು ಸೂಚಿಸುವಂತೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಗೆ ಬೆಳ್ತಂಗಡಿ ಶಾಸಕ ಹರೀಶ ಪೂಂಜ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು