News Karnataka Kannada
Friday, May 17 2024
ಕರಾವಳಿ

ಕೆವಿಜಿ ಸುಳ್ಯ ಹಬ್ಬಕ್ಕೆ ಚಾಲನೆ: ನಗರದಲ್ಲಿ ಸ್ವಚ್ಛತಾ ಅಭಿಯಾನ

Photo Credit :

ಕೆವಿಜಿ ಸುಳ್ಯ ಹಬ್ಬಕ್ಕೆ ಚಾಲನೆ: ನಗರದಲ್ಲಿ ಸ್ವಚ್ಛತಾ ಅಭಿಯಾನ

ಸುಳ್ಯ:  ಆಧುನಿಕ ಸುಳ್ಯದ ಶಿಲ್ಪಿ ಡಾ.ಕುರುಂಜಿ ವೆಂಕಟ್ರಮಣ ಗೌಡರ 88 ನೇ ಜನ್ಮ ದಿನಾಚರಣೆಯ ಅಂಗವಾಗಿ ಕೆ.ವಿ.ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ವತಿಯಿಂದ ಮೂರು ದಿನಗಳ ಕಾಲ ಆಚರಿಸುವ ಕೆ.ವಿ.ಜಿ ಸುಳ್ಯ ಹಬ್ಬಕ್ಕೆ ಚಾಲನೆ ದೊರೆತಿದೆ.

ಕಾರ್ಯಕ್ರಮದ ಅಂಗವಾಗಿ ಬುಧವಾರ ಸುಳ್ಯದಲ್ಲಿ ಸ್ವಚ್ಛತಾ ಆಂದೋಲನ ನಡೆಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್, ಸುಳ್ಯ ನಗರ ಪಂಚಾಯಿತಿ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸ್ವಚ್ಛತಾ ಆಂದೋಲನ ನಡೆಯಿತು. ಸುಳ್ಯ ನಗರದ  ಶಾಸ್ತ್ರಿ ವೃತ್ತದಿಂದ ಆರಂಭಗೊಂಡ ಸ್ವಚ್ಛತಾ ಆಂದೋಲನಕ್ಕೆ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಚಾಲನೆ ನೀಡಿದರು. ನಗರ ಪಂಚಾಯಿತಿ ಅಧ್ಯಕ್ಷೆ ಶೀಲಾವತಿ ಮಾಧವ ಅಧ್ಯಕ್ಷತೆ ವಹಿಸಿದ್ದರು. ನಗರ ಪಂಚಾಯಿತಿ ಉಪಾಧ್ಯಕ್ಷೆ ಹರಿಣಾಕ್ಷಿ ನಾರಾಯಣ, ಸ್ಥಾಯಿ ಸಮಿತಿ ಅಧ್ಯಕ್ಷೆ ಮೋಹಿನಿ ನಾಗರಾಜ್, ಸದಸ್ಯರಾದ ಪ್ರಕಾಶ್ ಹೆಗ್ಡೆ, ಕೆ.ಎಂ.ಮುಸ್ತಫಾ, ಮೀನಾಕ್ಷಿ, ಗಿರೀಶ್ ಕಲ್ಲುಗದ್ದೆ, ಕಿರಣ್ ಕುರುಂಜಿ, ಕಸಾಪ ಅಧ್ಯಕ್ಷ ಡಾ.ಹರಪ್ರಸಾದ್ ತುದಿಯಡ್ಕ,  ಕೆ.ವಿ.ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಅಧ್ಯಕ್ಷೆ ಎಂ.ಮೀನಾಕ್ಷಿ ಗೌಡ, ಎಸ್.ಐ.ಚಂದ್ರಶೇಖರ ಹೆಚ್.ವಿ, ಪ್ರಮುಖರಾದ ಪಡ್ಡಂಬೈಲು ವೆಂಕಟ್ರಮಣ ಗೌಡ,     ಡಾ.ಲೀಲಾಧರ್, ಜಗದೀಶ್ ಅಡ್ತಲೆ, ಡಾ.ಎನ್.ಎಸ್.ಶೆಟ್ಟರ್, ಅಬ್ಬಾಸ್ ಹಾಜಿ ಕಟ್ಟೆಕ್ಕಾರ್, ಡಾ.ನಂದಕುಮಾರ್, ಗುಣವತಿ ಕೊಲ್ಲಂತ್ತಡ್ಕ, ಡಾ.ರೇವತಿ ನಂದನ್, ಪ್ರೊ.ಜವರೇ ಗೌಡ,  ದೊಡ್ಡಣ್ಣ ಬರೆಮೇಲು, ಕೆ.ಟಿ.ವಿಶ್ವನಾಥ, ಜಯರಾಮ ದೇರಪ್ಪಜ್ಜನಮನೆ, ಗಿರಿಜಾಶಂಕರ ತುದಿಯಡ್ಕ, ಡಾ.ಪೂವಪ್ಪ ಕಣಿಯೂರು, ಪಿ.ಎ.ಮಹಮ್ಮದ್, ಜಯಪ್ರಕಾಶ್ ರೈ, ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಪ್ರಧಾನ ಕಾರ್ಯದ ಚಂದ್ರಶೇಖರ ಪೇರಾಲು, ಸಂಚಾಲಕ ದಿನೇಶ್ ಅಂಬೆಕಲ್ಲು ಕೋಶಾಧಿಕಾರಿ ಡಾ.ಪುರುಷೋತ್ತಮ ಕೆ.ಜಿ. ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಬಳಿಕ ನಗರಾದ್ಯಂತ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳು, ಶಿಕ್ಷಕರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಸ್ವಚ್ಛತಾ ಅಭಿಯಾನದಲ್ಲಿ ಕೈ ಜೋಡಿಸಿದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು