News Karnataka Kannada
Friday, May 03 2024
ಕರಾವಳಿ

ಕೊರೊನಾ ಪಾಸಿಟಿವ್ ವ್ಯಕ್ತಿ ಆತ್ಮಹತ್ಯೆ: ಹಿಂದೂ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಸಿದ ಮುಸ್ಲಿಂ ಸಂಘಟನೆ

Photo Credit :

ಕೊರೊನಾ ಪಾಸಿಟಿವ್ ವ್ಯಕ್ತಿ ಆತ್ಮಹತ್ಯೆ: ಹಿಂದೂ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಸಿದ ಮುಸ್ಲಿಂ ಸಂಘಟನೆ

ಮೂಡುಬಿದಿರೆ: ಇಲ್ಲಿನ ಪುರಸಭೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರು ಕೊರೊನಾ ಪಾಸಿಟಿವ್ ಸೋಂಕಿಗೆ ಒಳಗಾಗಿ ಮನನೊಂದು ಮಂಗಳವಾರ ಸಾಯಂಕಾಲ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ವ್ಯಕ್ತಿ ವಾರಿಸುದಾರರು ಬಾರದಿದ್ದಾಗ, ಮಗನ ಕೋರಿಕೆಯಂತೆ  ಮೂಡುಬಿದಿರೆ ವಲಯದ ಮುಸ್ಲಿಂ ಸಂಘಟನೆ ಕಾರ್ಯಕರ್ತರು ಹಿಂದೂ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನೆರವೇರಿಸಿ ಮಾನವೀಯತೆ ಮೆರೆದಿದ್ದಾರೆ.

ಕಾರ್ಯಕರ್ತರು ಮುಂದೆ ಬಂದು ಆಸ್ಪತ್ರೆಯ ಎಲ್ಲಾ ನಿಯಮಗಳಿಗೆ ಬದ್ದರಾಗಿ, ನಂತರ ಹಿಂದೂ ವಿಧಿವಿಧಾನದ ಪ್ರಕಾರ ಅಂತ್ಯಸಂಸ್ಕಾರಕ್ಕೆ ಬೇಕಾದ ಎಲ ವ್ಯವಸ್ಥೆಯನ್ನು ಮಾಡುವಲ್ಲಿ ಸಂಘಟನೆ ಕಾರ್ಯಕರ್ತರು ಯಶಸ್ವಿಯಾಗಿದ್ದಾರೆ.

ಸಂಘಟನೆಯ ಮೂಡುಬಿದಿರೆ ವಲಯದ ಅಧ್ಯಕ್ಷ ಅಶ್ರಫ್ ಮರೋಡಿ, ವಲಯ ಪ್ರಧಾನ ಕಾರ್ಯದರ್ಶಿ ಫಾರೂಕ್ ವಿಶಾಲ್ ನಗರ,ವಲಯ ವಿಖಾಯ ಅಧ್ಯಕ್ಷ ಹೈದರ್ ಕೋಟೆಬಾಗಿಲು, ಪ್ರಮುಖರಾದ ಕರೀಮ್ ವಿಶಾಲ್ ನಗರ, ಅಕ್ಬರ್ ತೋಡಾರ್, ರಾಝಿಕ್ ಮಾರ್ಪಾಡಿ,ಕಲಂದರ್ ಈದ್ಗಾ ಹಾಗೂ ಇಬ್ರಾಹಿಂ ಅಂಗರಕರಿಯ ಉಪಸ್ಥಿತರಿದ್ದರು. ಪುರಸಭೆ ಸದಸ್ಯ ಸುರೇಶ್ ಪ್ರಭು ಸಹಕರಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
193
Deevith S K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು