ಮೂಡುಬಿದಿರೆ: ಇಲ್ಲಿನ ಪುರಸಭೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರು ಕೊರೊನಾ ಪಾಸಿಟಿವ್ ಸೋಂಕಿಗೆ ಒಳಗಾಗಿ ಮನನೊಂದು ಮಂಗಳವಾರ ಸಾಯಂಕಾಲ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ವ್ಯಕ್ತಿ ವಾರಿಸುದಾರರು ಬಾರದಿದ್ದಾಗ, ಮಗನ ಕೋರಿಕೆಯಂತೆ ಮೂಡುಬಿದಿರೆ ವಲಯದ ಮುಸ್ಲಿಂ ಸಂಘಟನೆ ಕಾರ್ಯಕರ್ತರು ಹಿಂದೂ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನೆರವೇರಿಸಿ ಮಾನವೀಯತೆ ಮೆರೆದಿದ್ದಾರೆ.
ಕಾರ್ಯಕರ್ತರು ಮುಂದೆ ಬಂದು ಆಸ್ಪತ್ರೆಯ ಎಲ್ಲಾ ನಿಯಮಗಳಿಗೆ ಬದ್ದರಾಗಿ, ನಂತರ ಹಿಂದೂ ವಿಧಿವಿಧಾನದ ಪ್ರಕಾರ ಅಂತ್ಯಸಂಸ್ಕಾರಕ್ಕೆ ಬೇಕಾದ ಎಲ ವ್ಯವಸ್ಥೆಯನ್ನು ಮಾಡುವಲ್ಲಿ ಸಂಘಟನೆ ಕಾರ್ಯಕರ್ತರು ಯಶಸ್ವಿಯಾಗಿದ್ದಾರೆ.
ಸಂಘಟನೆಯ ಮೂಡುಬಿದಿರೆ ವಲಯದ ಅಧ್ಯಕ್ಷ ಅಶ್ರಫ್ ಮರೋಡಿ, ವಲಯ ಪ್ರಧಾನ ಕಾರ್ಯದರ್ಶಿ ಫಾರೂಕ್ ವಿಶಾಲ್ ನಗರ,ವಲಯ ವಿಖಾಯ ಅಧ್ಯಕ್ಷ ಹೈದರ್ ಕೋಟೆಬಾಗಿಲು, ಪ್ರಮುಖರಾದ ಕರೀಮ್ ವಿಶಾಲ್ ನಗರ, ಅಕ್ಬರ್ ತೋಡಾರ್, ರಾಝಿಕ್ ಮಾರ್ಪಾಡಿ,ಕಲಂದರ್ ಈದ್ಗಾ ಹಾಗೂ ಇಬ್ರಾಹಿಂ ಅಂಗರಕರಿಯ ಉಪಸ್ಥಿತರಿದ್ದರು. ಪುರಸಭೆ ಸದಸ್ಯ ಸುರೇಶ್ ಪ್ರಭು ಸಹಕರಿಸಿದರು.