ಉಡುಪಿ: ಕೊಲ್ಲೂರು ದೇವಸ್ಥಾನ ಕ್ಕೆ ಸಿಎಂ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ. ಚುನಾವಣಾ ಪ್ರಚಾರಕ್ಕಾಗಿ ಬೈಂದೂರಿಗೆ ಆಗಮಿಸಿದ್ದ ಸಿಎಂ, ಸಭೆಯ ಬಳಿಕ ದೇವಿಯ ದರ್ಶನ ಪಡೆದಿದ್ದಾರೆ.
ಮೈತ್ರಿ ಸರ್ಕಾರದ ಅಭ್ಯರ್ಥಿ ಮಧು ಬಂಗಾರಪ್ಪ ಪರ ಪ್ರಚಾರ ನಡೆಸಲು ಆಗಮಿಸಿದ ಸಿಎಂ, ತ್ರಾಸಿನಲ್ಲಿ ನಡೆದ ಸಾರ್ವಜನಿಕ ಸಭೆಯ ಬಳಿಕ ಕೊಲ್ಲೂರು ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಮೂಕಾಂಬಿಕಾ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸಿಎಂ, ವಿಶೇಪ ಪ್ರಾರ್ಥನೆ ಸಲ್ಲಿಸಿದರು. ಪ್ರಚಾರ ಸಭೆಯ ಬಳಿಕ ದೇವಿಯ ದರ್ಶನ ಪಡೆದು ದೇವಸ್ಥಾನ ದಲ್ಲೇ ಸಿಎಂ ಪ್ರಸಾದ ಭೋಜನ ಸ್ವೀಕರಿಸಿದರು.
ಸಿಎಂ ಜೊತೆ ಸಚಿವೆ ಜಯಮಾಲಾ, ಬೋಜೇಗೌಡ ಭಾಗಿಯಾಗಿದ್ದರು.