News Karnataka Kannada
Monday, May 20 2024
ಕರಾವಳಿ

ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ನಗರ ಪಂಚಾಯಿತಿ ಪ್ರಗತಿ ಪರಿಶೀಲನಾ ಸಭೆ

Photo Credit :

ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ನಗರ ಪಂಚಾಯಿತಿ ಪ್ರಗತಿ ಪರಿಶೀಲನಾ ಸಭೆ

ಸುಳ್ಯ: ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಸುಳ್ಯ ನಗರ ಪಂಚಾಯಿತಿಗೆ ಆಗಮಿಸಿ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಹಿಂದಿನ ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಅನುಷ್ಠಾನದ ಬಗ್ಗೆ ಅವರು ಪರಿಶೀಲಿಸಿದರು.

ಕಲ್ಚರ್ಪೆಯ ನಗರ ಪಂಚಾಯಿತಿಯ ತ್ಯಾಜ್ಯ ವಿಲೇವಾರಿ ಘಟಕ ತುಂಬಿ ತುಳುಕಿ ಸಮಸ್ಯೆ ಉಂಟಾಗಿರುವ ಬಗ್ಗೆ ಏನು ಕ್ರಮ ಕೈಗೊಂಡಿದ್ದೀರಿ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು. ಈಗ ಹಸಿ ಕಸ ಮತ್ತು ಒಣ ಕಸ ಎಂಬ ರೀತಿಯಲ್ಲಿ ಬೇರ್ಪಡಿಸಿ ಹಸಿ ಕಸವನ್ನು ಮಾತ್ರ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಕೊಂಡೊಯ್ಯಲಾಗುತ್ತಿದೆ. ಅಲ್ಲಿರುವ ಕಸವನ್ನು ಬೇರ್ಪಡಿಸಿ ವಿಲೇವಾರಿ ನಡೆಸುವ ಕೆಲಸ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ವಿವರಿಸಿದರು.

ಸಾಹಿತ್ಯ ಸಮ್ಮೇಳನ, ದಸರಾ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಸಹಾಯಧನ ನೀಡಲು ಬಜೆಟ್‍ನಲ್ಲಿ ಅನುದಾನ ಇರಿಸಿದ್ದರೂ ಅದನ್ನು ವಿನಿಯೋಗಿಸಲು ಅನುಮತಿ ನೀಡಲಾಗುತ್ತಿಲ್ಲ ಎಂದು ಸದಸ್ಯ ಕೆ.ಗೋಕುಲ್‍ದಾಸ್ ಹೇಳಿದರು. ಈ ಕುರಿತು ಚರ್ಚೆ ನಡೆದಾಗ ಇದನ್ನು ಜಿಲ್ಲಾಧಿಕಾರಿಯ ಗಮನಕ್ಕೆ ತಂದು ಅನುಮೋದನೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಶ್ರೀನಿವಾಸ ಪೂಜಾರಿ ತಿಳಿಸಿದರು.

ಸುಳ್ಯದಲ್ಲಿ ಗಾಂಧೀಮಂಟಪ ಮತ್ತು ಕ್ರೀಡಾಂಗಣಕ್ಕೆ ಭೂ ಮಂಜೂರಾತಿ ಆಗಬೇಕೆಂದು ಹಲವು ಬಾರಿ ನಿರ್ಣಯ ಕೈಗೊಂಡರೂ ಅನುಷ್ಠಾನ ಆಗಿಲ್ಲ ಎಂದು ಗೋಕುಲ್‍ದಾಸ್ ಹೇಳಿದಾಗ ಈ ಕುರಿತು ಜಿಲ್ಲಾಧಿಕಾರಿಗಳ ಜೊತೆ ಚರ್ಚೆ ನಡೆಸುವುದಾಗಿ ಅವರು ಹೇಳಿದರು.

ನಗರ ಪಂಚಾಯಿತಿ ಅಧ್ಯಕ್ಷೆ ಶೀಲಾವತಿ ಮಾಧವ, ಉಪಾಧ್ಯಕ್ಷೆ ಹರಿಣಾಕ್ಷಿ ನಾರಾಯಣ, ಸ್ಥಾಯಿ ಸಮಿತಿ ಅಧ್ಯಕ್ಷ ಕಿರಣ್ ಕುರುಂಜಿ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

180

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು