News Karnataka Kannada
Sunday, May 05 2024
ಕರಾವಳಿ

ಕೋವಿಡ್‌ ವಿರುದ್ದ ಹೋರಾಟದಲ್ಲಿ ಒಂದೇ ದಿನ ಮೃತರಾದ ದಂಪತಿ

Couple Death 17 6 21 ..
Photo Credit :

ಮಂಗಳೂರು : ಕೊರೊನಾ ಸೋಂಕು ತಗುಲಿದ ಕಾರಣ ಕಳೆದ 12 ದಿನಗಳಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದಂಪತಿ ಒಂದೇ ದಿನ ಸಾವನ್ನಪಿದ ಘಟನೆ ನೆಲ್ಯಾಡಿಯಲ್ಲಿ ನಡೆದಿದೆ.ಬೆಳ್ತಂಗಡಿ ತಾಲೂಕಿನ ಮುಂಡಾಜೆ ಸೈಂಟ್ ಮೇರಿಸ್ ಚರ್ಚ್‌ನ ಧರ್ಮಗುರು ಸೆಬಾಸ್ಟಿಯನ್ ಪುನ್ನತ್ತಾನತ್ತ್ ಅವರ ತಾಯಿ ಮೇರಿ ಪುನ್ನತ್ತಾನತ್ತ್ ಮತ್ತು ಅವರ ತಂದೆ ವರ್ಗೀಸ್ ಪುನ್ನತ್ತಾನತ್ತ್ ಮೃತ ದಂಪತಿ. ಇವರು ನಿನ್ನೆ ಕೇವಲ ಮೂರುವರೆ ಗಂಟೆ ಅಂತರದಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ದಂಪತಿಯನ್ನು ಜುಲೈ 4 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ದಾಂಪತ್ಯ ಜೀವನದುದ್ದಕ್ಕೂ ಪರಸ್ಪರ ಅನ್ಯೋನ್ಯವಾಗಿದ್ದ ಇವರು ಸಾವಿನಲ್ಲೂ ಒಂದಾಗಿರುವುದು ವಿಶೇಷ.ಮೃತರು ಓರ್ವ ಧರ್ಮಗುರುಸಹಿತ ಇಬ್ಬರು ಗಂಡು ಮತ್ತು ಇಬ್ಬರು‌ ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಇವರ ಅಂತ್ಯಸಂಸ್ಕಾರವನ್ನು ನೆಲ್ಯಾಡಿಯ ಸೈಂಟ್ ಅಲ್ಫೋನ್ಸಾ ಚರ್ಚ್‌ನ ದಫನ ಭೂಮಿಯಲ್ಲಿ ಶುಕ್ರವಾರ ನೆರವೇರಿಸಲಾಗಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು