ಪುತ್ತೂರು: ಗಣೇಶೋತ್ಸವ ಸಂದರ್ಭದಲ್ಲಿ ಹಿಂದೂ ಕಾರ್ಯಕರ್ತನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಯು ಪುತ್ತೂರು ತಾಲೂಕಿನ ಸಂಪ್ಯ ಪೊಲೀಸ್ ಠಾಣೆ ಎದುರಿನಲ್ಲೇ ಮಂಗಳವಾರ ತಡರಾತ್ರಿ ವೇಳೆ ನಡೆದಿದೆ.
ಕೊಲೆಗೀಡಾದವರನ್ನು ಹಿಂದೂ ಜಾಗರಣ ವೇದಿಕೆಯ ತಾಲೂಕು ಕಾರ್ಯದರ್ಶಿ ಕಾರ್ತಿಕ್ ಸುವರ್ಣ ಎಂದು ಗುರುತಿಸಲಾಗಿದೆ.
ಮಂಗಳವಾರ ರಾತ್ರಿ ಸುಮಾರು 11.30 ಗಂಟೆಗೆ ಕಾರ್ತಿಕ್ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವೇಳೆ ಆರೋಪಿಗಳಾದ ಚರಣ್ ರಾಜ್, ಕಿರಣ್ ಮತ್ತು ವಾಹನ ಚಾಲಕ ಪ್ರೀತೇಶ್ ಚೂರಿಯಿಂದ ತಿವಿದಿದ್ದಾರೆ. ಕಾರ್ತಿಕ್ ರಕ್ತಸ್ರಾವದಿಂದ ಸ್ಥಳದಲ್ಲೇ ಕುಸಿದು ಬಿದಿದ್ದಾರೆ. ಕಾರ್ತಿಕ್ ಅವರನ್ನು ಪುತ್ತೂರು ಆದರ್ಶ ಆಸ್ಪತ್ರೆಗೆ ದಾಖಲಿಸಿದರೂ ಯಾವುದೇ ಪ್ರಯೋಜನವಾಗಲಿಲ್ಲ.
ಸಾರ್ವಜನಿಕರು ಸೇರುತ್ತಿದ್ದಂತೆ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.