News Karnataka Kannada
Saturday, April 27 2024
ಕರಾವಳಿ

ಗೃಹರಕ್ಷಕ ಸಿಬ್ಬಂದಿ ಭತ್ಯೆಯನ್ನು ಹೆಚ್ಚಿಸುವಂತೆ ಸಿಎಂಗೆ ಶಾಸಕ ಹರೀಶ್ ಪೂಂಜ ಮನವಿ

Mlaharish Bng 11072021
Photo Credit :

ಬೆಳ್ತಂಗಡಿ: ಗೃಹರಕ್ಷಕ ಸಿಬ್ಬಂದಿ ಕರ್ತವ್ಯ ಭತ್ಯೆಯನ್ನುವ ರೂ.750 ಕ್ಕೆ ಹೆಚ್ಚಿಸಿ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಶಾಸಕ ಹರೀಶ್ ಪೂಂಜ ಬೆಂಗಳೂರಲ್ಲಿ ಶುಕ್ರವಾರ ಮನವಿ ಸಲ್ಲಿಸಿದರು.

ಗೃಹರಕ್ಷಕ ದಳದ ಸಿಬ್ಬಂದಿ ಕೋವಿಡ್-19 ಎರಡನೆಯ ಅಲೆಯ ನಿಯಂತ್ರಣಕ್ಕಾಗಿ ವಿವಿಧ ರೀತಿಯಲ್ಲಿ ಶ್ರಮಿಸುತ್ತಿದ್ದಾರೆ.

ಇವರಿಗೆ ಸರಕಾರದಿಂದ ಯಾವುದೇ ವಿಶೇಷ ಸೌಕರ್ಯ ಲಭ್ಯವಾಗಿಲ್ಲ ಎಂಬ ಕೂಗು ಕೇಳಿ ಬಂದಿದೆ. ಈಗಾಗಲೇ ಸರಕಾರ ರಾಜ್ಯದ ಶ್ರಮಿಕ ವರ್ಗಕ್ಕೆ ವಿಶೇಷ ಪ್ಯಾಕೇಜ್ ಘೋಷಿಸಿದೆ.

ಆದರೆ ಗೃಹರಕ್ಷಕ ಸಿಬ್ಬಂದಿ ಸೌಲಭ್ಯ ವಂಚಿತರಾದಾಗ ಅನೇಕ ಸಂಘ-ಸಂಸ್ಥೆಗಳು, ಶಾಸಕರು, ದಾನಿಗಳು ನೆರವಾಗಿದ್ದಾರೆ. ರಾಜ್ಯದಲ್ಲಿ 25,000, ಜಿಲ್ಲೆಯಲ್ಲಿ 1,000 ಮಂದಿ ಸಿಬ್ಬಂದಿಗಳಿದ್ದು ಎಸ್.ಪಿ., ಕಮಿಷನರ್, ಅಗ್ನಿಶಾಮಕ, ಆರ್.ಟಿ.ಓ., ಪ್ರವಾಹ ರಕ್ಷಣೆ, ಕರಾವಳಿ ಪೋಲಿಸ್ ಪಡೆ ಹೀಗೆ ಅನೇಕ ವಿಭಾಗಗಳಲ್ಲಿ ಸರದಿಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.

ಸಂಕಷ್ಟದಲ್ಲಿರುವ ಅವರು ಕರ್ತವ್ಯ ಭತ್ಯೆಯಾಗಿ ಪ್ರಸ್ತುತ 380 ರೂ. ಮಾತ್ರ ಪಡೆಯುತ್ತಿದ್ದಾರೆ. ಹೀಗಾಗಿ ಅವರ ಭತ್ತೆಯನ್ನು ರೂ.750 ಕ್ಕೆ ಹೆಚ್ಚಿಸಿ ವಿಶೇಷ ಪ್ಯಾಕೇಜ್ ಪ್ರಕಟಿಸಿ‌ ನೆರವಾಗಬೇಕು ಎಂದು ಶಾಸಕರು ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ಪರಿಶೀಲಿಸಿ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಮುಖ್ಯಮಂತ್ರಿಗಳು ಸ್ಪಂದಿಸಿರುವುದಾಗಿ ಶಾಸಕರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು