Categories: ಕರಾವಳಿ

ಗೃಹರಕ್ಷಕ ಸಿಬ್ಬಂದಿ ಭತ್ಯೆಯನ್ನು ಹೆಚ್ಚಿಸುವಂತೆ ಸಿಎಂಗೆ ಶಾಸಕ ಹರೀಶ್ ಪೂಂಜ ಮನವಿ

ಬೆಳ್ತಂಗಡಿ: ಗೃಹರಕ್ಷಕ ಸಿಬ್ಬಂದಿ ಕರ್ತವ್ಯ ಭತ್ಯೆಯನ್ನುವ ರೂ.750 ಕ್ಕೆ ಹೆಚ್ಚಿಸಿ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಶಾಸಕ ಹರೀಶ್ ಪೂಂಜ ಬೆಂಗಳೂರಲ್ಲಿ ಶುಕ್ರವಾರ ಮನವಿ ಸಲ್ಲಿಸಿದರು.

ಗೃಹರಕ್ಷಕ ದಳದ ಸಿಬ್ಬಂದಿ ಕೋವಿಡ್-19 ಎರಡನೆಯ ಅಲೆಯ ನಿಯಂತ್ರಣಕ್ಕಾಗಿ ವಿವಿಧ ರೀತಿಯಲ್ಲಿ ಶ್ರಮಿಸುತ್ತಿದ್ದಾರೆ.

ಇವರಿಗೆ ಸರಕಾರದಿಂದ ಯಾವುದೇ ವಿಶೇಷ ಸೌಕರ್ಯ ಲಭ್ಯವಾಗಿಲ್ಲ ಎಂಬ ಕೂಗು ಕೇಳಿ ಬಂದಿದೆ. ಈಗಾಗಲೇ ಸರಕಾರ ರಾಜ್ಯದ ಶ್ರಮಿಕ ವರ್ಗಕ್ಕೆ ವಿಶೇಷ ಪ್ಯಾಕೇಜ್ ಘೋಷಿಸಿದೆ.

ಆದರೆ ಗೃಹರಕ್ಷಕ ಸಿಬ್ಬಂದಿ ಸೌಲಭ್ಯ ವಂಚಿತರಾದಾಗ ಅನೇಕ ಸಂಘ-ಸಂಸ್ಥೆಗಳು, ಶಾಸಕರು, ದಾನಿಗಳು ನೆರವಾಗಿದ್ದಾರೆ. ರಾಜ್ಯದಲ್ಲಿ 25,000, ಜಿಲ್ಲೆಯಲ್ಲಿ 1,000 ಮಂದಿ ಸಿಬ್ಬಂದಿಗಳಿದ್ದು ಎಸ್.ಪಿ., ಕಮಿಷನರ್, ಅಗ್ನಿಶಾಮಕ, ಆರ್.ಟಿ.ಓ., ಪ್ರವಾಹ ರಕ್ಷಣೆ, ಕರಾವಳಿ ಪೋಲಿಸ್ ಪಡೆ ಹೀಗೆ ಅನೇಕ ವಿಭಾಗಗಳಲ್ಲಿ ಸರದಿಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.

ಸಂಕಷ್ಟದಲ್ಲಿರುವ ಅವರು ಕರ್ತವ್ಯ ಭತ್ಯೆಯಾಗಿ ಪ್ರಸ್ತುತ 380 ರೂ. ಮಾತ್ರ ಪಡೆಯುತ್ತಿದ್ದಾರೆ. ಹೀಗಾಗಿ ಅವರ ಭತ್ತೆಯನ್ನು ರೂ.750 ಕ್ಕೆ ಹೆಚ್ಚಿಸಿ ವಿಶೇಷ ಪ್ಯಾಕೇಜ್ ಪ್ರಕಟಿಸಿ‌ ನೆರವಾಗಬೇಕು ಎಂದು ಶಾಸಕರು ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ಪರಿಶೀಲಿಸಿ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಮುಖ್ಯಮಂತ್ರಿಗಳು ಸ್ಪಂದಿಸಿರುವುದಾಗಿ ಶಾಸಕರು ತಿಳಿಸಿದ್ದಾರೆ.

Sampriya YK

Recent Posts

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

2 hours ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

2 hours ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

2 hours ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

3 hours ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

3 hours ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

3 hours ago