ಬೆಳ್ತಂಗಡಿ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಗೋಕಳ್ಳತನ, ಅಕ್ರಮ ಗೋಸಾಗಾಟ, ಗೋಹತ್ಯೆ ಜಿಲ್ಲೆಯ ಕೃಷಿ ಮತ್ತು ಹೈನುಗಾರಿಕೆಯ ಜೊತೆಗೆ ಸಾಮಾಜಿಕ ಸಾಮರಸ್ಯವನ್ನು ಹದಗೆಡಿಸುತ್ತಿದ್ದು ಇದನ್ನು ನಿಲ್ಲಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದ.ಕ. ಜಿಲ್ಲಾಧಿಕಾರಿಯವರಿಗೆ ಬಿಜೆಪಿಯಿಂದ ಮನವಿ ಸಲ್ಲಿಸಲಾಯಿತು. ಮನವಿಯಲ್ಲಿ ಜಿಲ್ಲಾಡಳಿತ ತಕ್ಷಣ ತೆಗೆದುಕೊಳ್ಳಬೇಕಾದ ಇಪ್ಪತ್ತು ಬೇಡಿಕೆಗಳನ್ನು ಸಲ್ಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಗ್ರಹಿಸಲಾಯಿತು.
ಭಾರತೀಯ ಜನತಾ ಪಾರ್ಟಿಯ ನಿಯೋಗದಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ, ಜಿಲ್ಲಾಧ್ಯಕ್ಷ, ಶಾಸಕ ಸಂಜೀವ ಮಠಂದೂರು, ಶಾಸಕರಾದ ಅಂಗಾರ, ಹರೀಶ್ ಪೂಂಜ, ಉಮನಾಥ್ ಕೋಟ್ಯಾನ್, ರಾಜೇಶ್ ನಾಯ್ಕ್, ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ವಿವಿಧ ಹಿಂದೂ ಸಂಘಟನೆಗಳ ಪದಾಧಿಕಾರಿಗಳಾದ ಶರಣ್ ಪಂಪ್ವೆಲ್, ಜಗದೀಶ್ ಶೇಣವ ಹಾಗೂ ಪದಾಧಿಕಾರಿಗಳು ಇದ್ದರು.