ಸುಳ್ಯ: ಸುಳ್ಯ ತಾಲೂಕಿನ 25 ಗ್ರಾಮ ಪಂಚಾಯತ್ಗಳಲ್ಲಿ ನಡೆದ ಚುನಾವಣೆ ಶಾಂತಿಯುತವಾಗಿತ್ತು.
ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಬೆಳಗ್ಗೆ ಮತದಾನ ಆರಂಭಗೊಂಡ ಸಮಯದಲ್ಲಿ ಉದ್ದನೆಯ ಸರತಿ ಸಾಲು ಕಂಡು ಬಂದು ಬಿರುಸಿನ ಮತದಾನ ನಡೆದಿತ್ತು. ಬಳಿಕ ಮತದಾನ ಸಾವಧಾನವಾಗಿ ಮುಂದುವರಿಯಿತು. ಕೆಲವೆಡೆ ಮಧ್ಯಾಹ್ನದವರೆಗೂ ಮತದಾನಕ್ಕೆ ಸರತಿ ಸಾಲು ಕಂಡು ಬಂದಿತ್ತು. ಒಂದು ಸಾವಿರಕ್ಕೂ ಅಧಿಕ ಮತದಾರರಿದ್ದ ಮತಗಟ್ಟೆಗಳನ್ನು ವಿಭಜಿಸಿ 27 ಹೆಚ್ಚುವರಿ ಮತಗಟ್ಟೆಗಳು ಸ್ಥಾಪಿಸಲಾಗಿತ್ತು. ಈ ಹಿನ್ನಲೆಯಲ್ಲಿ ಬಹುತೇಕ ಮತಗಟ್ಟೆಗಳಲ್ಲಿ ಮತದಾನಕ್ಕೆ ನೂಕು ನುಗ್ಗಲು ಕಂಡು ಬರಲಿಲ್ಲ. ಸಂಜೆಯ ವೇಳೆಗೆ ಕೆಲವು ಮತಗಟ್ಟೆಗಳಲ್ಲಿ ಉದ್ದನೆಯ ಸರತಿ ಸಾಲು ಕಂಡು ಬಂದಿತ್ತು. ಮತದಾನ ಶಾಂತಿಯುತವಾಗಿ ನಡೆಯಿತು. ಸಂಜೆಯವರೆಗೂ ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ. ಬಿಗಿ ಭದ್ರತೆಯನ್ನೂ ಏರ್ಪಡಿಸಲಾಗಿತ್ತು. ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಮತಗಟ್ಟೆಗಳಲ್ಲಿ ಹೆಚ್ಚಿನ ಭದ್ರತೆ ಏರ್ಪಡಿಸಲಾಗಿತ್ತು. ಈ ಮತಗಟ್ಟೆಗಳಲ್ಲಿ ಚುನಾವಣಾ ಪ್ರಕ್ರಿಯೆಗಳ ವೀಡಿಯೋಗ್ರಫಿ ನಡೆಸಲಾಗಿತ್ತು. 25 ಗ್ರಾಮ ಪಂಚಾಯತ್ಗಳ 96 ವಾರ್ಡ್ ಗಳಲ್ಲಿ ಒಟ್ಟು 282 ಸದಸ್ಯರಲ್ಲಿ 6 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 276 ಸದಸ್ಯರ ಆಯ್ಕೆಗೆ ಚುನಾವಣೆ ನಡೆಯಿತು. 636 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಡಿ.30 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.
ಶಾಸಕ ಎಸ್.ಅಂಗಾರ ಮತದಾನ:
ಸುಳ್ಯ ಶಾಸಕ ಎಸ್.ಅಂಗಾರ ಅಮರ ಮುಡ್ನೂರು ಗ್ರಾಮ ಪಂಚಾಯತ್ನ ಮೂರನೇ ವಾರ್ಡ್ನಲ್ಲಿ ದೊಡ್ಡತೋಟ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಬೆಳಗ್ಗೆ ಏಳು ಗಂಟೆಗೆ ಕುಟುಂಬ ಸಮೇತರಾಗಿ ಆಗಮಿಸಿ ಅವರು ಮತ ಚಲಾಯಿಸಿದರು.
ಸ್ಯಾಮ್ ಪಿತ್ರೋಡಾ ಅವರ ಜನಾಂಗೀಯ ಟೀಕೆಗೆ ಪ್ರತಿಕ್ರಿಯಿಸಿದ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ, ನಾನು ಡಾರ್ಕ್ ಸ್ಕಿನ್ ಭಾರತೀಯ ಎಂದು…
ಜಿಲ್ಲೆಯ ಬಹುತೇಕ ಕಡೆ ಇಂದು ಗುಡುಗು, ಸಿಡಿಲಿನೊಂದಿಗೆ ಆಲಿಕಲ್ಲು ಮಳೆ ಸುರಿದಿದೆ. ಹಲವು ದಿನಗಳಿಂದ ವಿಪರೀತ ತಾಪಮಾನದಿಂದ ಬಸವಳಿದಿದ್ದ ಜನರಿಗೆ…
ರೈತರಿಗೆ ಆಗಾಗ್ಗೆ ಉಪಟಳ ನೀಡುತ್ತಾ ತಲೆನೋವಾಗಿದ್ದ ಪುಂಡಾನೆಯನ್ನು ಸುಮಾರು ಇಪ್ಪತೈದು ದಿನಗಳ ಕಾಲ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಅರಣ್ಯಾಧಿಕಾರಿಗಳು ಗೋಪಾಲಸ್ವಾಮಿ ಬೆಟ್ಟದ…
ಧಾರವಾಡದ ಐಐಟಿ ನೂತನ ನಿರ್ದೇಶಕರಾಗಿ ಪ್ರೊ. ಎಸ್.ಆರ್.ಮಹಾದೇವ ಪ್ರಸನ್ನ ನೇಮಕಗೊಂಡಿದ್ದಾರೆ. 2023 ರಲ್ಲಿ ಭಾರತದ ರಾಷ್ಟ್ರಪತಿ ದೌಪದಿ ಮುರ್ಮು ಅವರಿಂದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79)…
ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಮದ್ದೂರು ವಲಯದಲ್ಲಿ ಕಳೆದ ಏಪ್ರಿಲ್ 24 ರಂದು ಬೆಂಕಿ ಅವಘಡ ಸಂಭವಿಸಿ ಅಪಾರ ಪ್ರಮಾಣದ…