ಪುತ್ತೂರು: ಚಲಿಸುತ್ತಿದ್ದ ಕಾರಿನಲ್ಲಿ ಹಠಾತ್ ಆಗಿ ಬೆಂಕಿ ಕಾಣಸಿಕೊಂಡು ಸಂಪೂರ್ಣವಾಗಿ ಸುಟ್ಟುಭಸ್ಮವಾಗಿದ್ದು, ಚಾಲಕ ಅದೃಷ್ಟವಶಾತ್ ಅಪಾಯವಿಲ್ಲದೆ ಪಾರಾಗಿದ್ದಾರೆ.
ಸಂಟ್ಯಾರ್ ತಿರುವಿನ ಬಳಿ ಈ ಘಟನೆ ನಡೆದಿದ್ದು, ಪಾಲ್ತಾಡಿಯ ಇರ್ಷಾದ್ ಎಂಬವರಿಗೆ ಸೇರಿದ ಕಾರು ಇದು. ಪಾಲ್ತಾಡಿಯಿಂದ ಇರ್ಷಾದ್ ಅವರು ಫೋರ್ಡ್ ಐಕಾನ್ ಕಾರಿನಲ್ಲಿ ಪುತ್ತೂರಿಗೆ ಬರುತ್ತಿದ್ದ ವೇಳೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹಿಂಬದಿಯಿಂದ ಬರುತ್ತಿದ್ದ ಆ್ಯಂಬುಲೆನ್ಸ್ ಚಾಲಕ ಮಾಹಿತಿ ನೀಡಿದ ಕಾರಣ ಇರ್ಷಾದ್ ಅಪಾಯದಿಂದ ಪಾರಾಗಿದ್ದಾರೆ.
ಅಗ್ನಿಶಾಮಕ ದಳವರು ಬಂದು ಬೆಂಕಿ ನಂದಿಸಿದರೂ ಅದಾಗಲೇ ಕಾರು ಸುಟ್ಟು ಹೋಗಿತ್ತು. ಈ ಬಗ್ಗೆ ಸಂಪ್ಯ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.