News Karnataka Kannada
Thursday, May 09 2024
ಕರಾವಳಿ

ಚಾರ್ಮಾಡಿ ಘಾಟಿಯಲ್ಲಿ ಪ್ರಪಾತಕ್ಕೆ ಉರುಳಿದ ಬೊಲೆರೋ

Photo Credit :

ಚಾರ್ಮಾಡಿ ಘಾಟಿಯಲ್ಲಿ ಪ್ರಪಾತಕ್ಕೆ ಉರುಳಿದ ಬೊಲೆರೋ

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಎರಡನೆಯ ತಿರುವಿನಲ್ಲಿ ಬೊಲೆರೋವೊಂದು ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದು ಅದರಲ್ಲಿದ್ದವರು ಗಾಯಗೊಂಡ ಘಟನೆ ಸೋಮವಾರ ಸಂಭವಿಸಿದೆ.

ವಾಹನ ಪ್ರಪಾತಕ್ಕೆ ಉರುಳುತ್ತಿದ್ದಂತೆಯೇ ಹಿಂದಿನಿಂದ ಬರುತ್ತಿದ್ದ ವಾಹನದಲ್ಲಿದ್ದ ಮುಂಡಾಜೆ ಗ್ರಾ. ಪಂ. ಸದಸ್ಯ ಅಬ್ದುಲ್ ಅಝೀಜ್ ಹಾಗೂ ಇತರರು ಕೂಡಲೇ ಅಪಾಯಕ್ಕೆ ಸಿಲುಕಿದ್ದವರ ರಕ್ಷಣೆಗೆ ಧಾವಿಸಿದ್ದು, ಸುಮಾರು 60 ಅಡಿ ಪ್ರಪಾತದಲ್ಲಿ ಸಲುಕಿದ್ದವರನ್ನು ಹಗ್ಗದ ಸಹಾಯದಿಂದ ಮೇಲೆತ್ತಿದ್ದಾರೆ, ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕಾಟ್ಗಿ ನಿವಾಸಿಗಳಾಗಿರುವ ಚಾಲಕ ಶ್ರೀಧರ್(38), ಶರಣಪ್ಪ(34) ಹಾಗೂ ತೇಜಸ್ವಿನಿ(9) ಗಾಯಗೊಂಡವರಾಗಿದ್ದಾರೆ. ವಾಹನದಲ್ಲಿದ್ದ ಇತರರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.

ರಾತ್ರಿ ಒಂದು ಗಂಟೆಯ ಸಮಯ ಈ ಅಪಘಾತ ಸಂಭವಿಸಿದ್ದು, ರಕ್ಷಣಾ ಕಾರ್ಯದಲ್ಲಿ ಅಬ್ದುಲ್ ಅಝೀಜ್ ಅವರೊಂದಿಗೆ ಹಕ್ಕೀಮ್ ಕಾಜೂರು, ಬಶೀರ, ಹಮೀದ್ ಉಜಿರೆ, ಉಮ್ಮರ್ ಮುಂಡಾಜೆ ಹಾಗೂ ಇತರರು ಸಹಕರಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು